ಜನ ಮನದ ನಾಡಿ ಮಿಡಿತ

Advertisement

ರಾಜ್ಯ ಮಟ್ಟದಲ್ಲಿ 8ನೇ ರ‍್ಯಾಂಕ್ ಪಡೆದ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ ಜೆ ಶೆಟ್ಟಿ..!

2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶ ಪ್ರಕಟವಾಗಿದ್ದು, ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ ಜೆ ಶೆಟ್ಟಿ ರಾಜ್ಯ ಮಟ್ಟದಲ್ಲಿ 8ನೇ ರ‍್ಯಾಂಕ್ ಪಡೆದು ಅಪೂರ್ವ ಸಾಧನೆ ಮಾಡಿದ್ದಾರೆ.

ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಸಮೃದ್ಧಿ, ಒಟ್ಟು 600 ಅಂಕಗಳಲ್ಲಿ 593 ಅಂಕಗಳನ್ನು ಗಳಿಸಿ ಕಾಲೇಜು ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಸಮೃದ್ಧಿ ಅವರು ತಮ್ಮ ಪ್ರೌಢಶಾಲಾ ಶಿಕ್ಷಣವನ್ನು ಪುತ್ತೂರಿನ ತೆಂಕಿಲದಲ್ಲಿರುವ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ ಪೂರ್ಣಗೊಳಿಸಿದ್ದರು.

ವಿದ್ಯಾರ್ಥಿನಿಯ ಈ ಅದ್ಭುತ ಸಾಧನೆಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕೇತರ ಸಿಬ್ಬಂದಿ, ಪಿಟಿಎ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಮೇಲುಗೈಗೆ ಈ ಸಾಧನೆ ಮತ್ತೊಂದು ಹೆಮ್ಮೆಯ ಗರಿ ಮೂಡಿಸಿದೆ.

ಇದಲ್ಲದೆ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಯಲ್ಲೂ ಹೆಸರು ಗಳಿಸಿರುವ ಈಕೆ ಕ್ರೀಡೆಯಲ್ಲಿ, ನೃತ್ಯದಲ್ಲಿ ಅತ್ಯತ್ಭುತ ಸಾಧನೆಯನ್ನು ಮಾಡಿ ಸೈ ಎನಿಸಿಕೊಂಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

ಮಂಗಳೂರು: ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತು ಮಾರಾಟ..!

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ; ಆರೋಪಿ ಬಂಧನ..!

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತ್ತ್ಯು …!

ನೆಲಮಂಗಲ: ಕುಣಿಗಲ್ ಬೈಪಾಸ್‌ನಲ್ಲಿ ಆಂಬುಲೆನ್ಸ್ ಅಪಘಾತ…!

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿ ಸಾವು ವಾರಸುದಾರರಿಗಾಗಿ ಮನವಿ…!

ಜೋಕಟ್ಟೆ: 21 ವರ್ಷದ ಯುವತಿ ಹಸೀನಾ ಖತೂನ್ ನಾಪತ್ತೆ…!

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು‌ ಭೇಟಿಯಾದ ಸಂತೋಷ್ ಪೈ…!

ಬಂಟ್ವಾಳ: ಬೈಕ್-ಸ್ಕೂಟರ್ ಡಿಕ್ಕಿ: 10 ವರ್ಷದ ಬಾಲಕಿ ಸಾವು…!

error: Content is protected !!