ಜನ ಮನದ ನಾಡಿ ಮಿಡಿತ

Advertisement

ಸುಳ್ಯ: ಮೊಬೈಲ್ ವಿಚಾರವಾಗಿ ಬಾಲಕನಿಗೆ ಗದರಿದ ತಾಯಿ..! ಮುನಿಸಿಕೊಂಡ ಬಾಲಕ ನಾಪತ್ತೆ…?

ಮೊಬೈಲ್ ನೋಡುವ ವಿಚಾರವಾಗಿ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ 16 ವರ್ಷದ ಅಪ್ರಾಪ್ತ ಬಾಲಕನೊಬ್ಬ ಮನೆಯಿಂದ ಹೊರಹೋಗಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಸುಳ್ಯದ ಕಸಬಾ ಗ್ರಾಮದಲ್ಲಿ ನಡೆದಿದೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯಾಗಿದ್ದು, ಪ್ರಸ್ತುತ ಸುಳ್ಯದ ಬೋರುಗುಡ್ಡೆಯಲ್ಲಿ ಪೋಷಕರೊಂದಿಗೆ ವಾಸವಿದ್ದ ಸೈಯದ್ ಆಲಿ ಸೈಯದ್ (16) ನಾಪತ್ತೆಯಾದ ಬಾಲಕ. ಮೇ 30ರಂದು ಬೆಳಗ್ಗೆ ಸೈಯದ್ ಗೆ ಮೊಬೈಲ್ ನೋಡುತ್ತಿರುವ ವಿಚಾರದಲ್ಲಿ ತಾಯಿ ಬೈದು ಮೊಬೈಲ್ ಹವ್ಯಾಸ ಬಿಡುವಂತೆ ಬುದ್ಧಿಮಾತು ಹೇಳಿದ್ದರು. ಇದರಿಂದ ಮನಸ್ತಾಪ ಮಾಡಿಕೊಂಡ ಬಾಲಕ, ಸ್ವಲ್ಪ ಸಮಯದ ಬಳಿಕ ಯಾರಿಗೂ ಹೇಳದೆ ಮನೆಯಿಂದ ಹೊರಹೋಗಿದ್ದಾನೆ. ಸೈಯದ್ ಎಷ್ಟು ಹೊತ್ತಾದರೂ, ಮನೆಗೆ ಹಿಂತಿರುಗದ ಹಿನ್ನೆಲೆ ಆತನ ಕುಟುಂಬಸ್ಥರು ಆತನ ಗೆಳೆಯರಲ್ಲಿ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಿದರೂ ಪತ್ತೆಯಾಗಿರುವುದಿಲ್ಲ. ಬಳಿಕ ದೂರು ದಾಖಲಿಸಿಕೊಂಡ ಸುಳ್ಯ ಪೊಲೀಸ್ ಠಾಣೆಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!