ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬೈಕ್-ಸ್ಕೂಟರ್ ಡಿಕ್ಕಿ: 10 ವರ್ಷದ ಬಾಲಕಿ ಸಾವು…!

 

ಕಲ್ಲಡ್ಕದಿ0ದ ಮಾಣಿಗೆ ತೆರಳುತ್ತಿದ್ದ ಬೈಕ್‌ಗೆ ಸ್ಕೂಟರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಹತ್ತು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.

ಬಾಳ್ತಿಲ ಗ್ರಾಮದ ಹೇಮಂತ್ ಕುಮಾರ್ ಎಂಬವರ ಪುತ್ರಿ ನೈರುತಿ ಎಂ. ಸುವರ್ಣ ಮೃತಪಟ್ಟ ಬಾಲಕಿ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿಯ ವೇಳೆ ಮೃತಪಟ್ಟಿದ್ದಾಳೆ. ನೆಟ್ಲ ಸದಾಶಿವ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಪತ್ನಿ ಮತ್ತು ಮಕ್ಕಳಾದ ನೈರುತಿ ಮತ್ತು ಆಕೆಯ ತಂಗಿಯೊ0ದಿಗೆ ಮನೆಗೆ ತೆರಳುತ್ತಿದ್ದ ವೇಳೆ ಹೇಮಂತ್ ಅವರಿದ್ದ ಬೈಕ್‌ಗೆ ಸ್ಕೂಟರ್ ಒಂದು ಡಿಕ್ಕಿ ಹೊಡೆದಿದೆ. ಸೂರಿಕುಮೇರು ಸಮೀಪ ಈ ಘಟನೆ ನಡೆದಿದೆ. ಡಿಕ್ಕಿ ಹೊಡೆದ ಪರಿಣಾಮ, ಕಾಂಕ್ರೀಟ್ ರಸ್ತೆಗೆ ನೈರಿತಿ ಬಿದ್ದಿದ್ದಾಳೆ. ಈ ಸಂದರ್ಭ ತಲೆಗೆ ಗಂಭೀರ ಪೆಟ್ಟಾಗಿದೆ. ಕೂಡಲೇ ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ಈಕೆ ಸ್ಥಳೀಯ ಪ್ರಾಥಮಿಕ ಶಾಲೆಗೆ ಹೋಗುತ್ತಿದ್ದು, ಭಜನಾ ತರಬೇತಿಯನ್ನೂ ಪಡೆಯುತ್ತಿದ್ದಳು. ಉತ್ತಮ ಭಜನಾಪಟುವೂ ಆಗಿದ್ದಳು.

Leave a Reply

Your email address will not be published. Required fields are marked *

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

ಮಂಗಳೂರು: ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತು ಮಾರಾಟ..!

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ; ಆರೋಪಿ ಬಂಧನ..!

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತ್ತ್ಯು …!

ನೆಲಮಂಗಲ: ಕುಣಿಗಲ್ ಬೈಪಾಸ್‌ನಲ್ಲಿ ಆಂಬುಲೆನ್ಸ್ ಅಪಘಾತ…!

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿ ಸಾವು ವಾರಸುದಾರರಿಗಾಗಿ ಮನವಿ…!

ಜೋಕಟ್ಟೆ: 21 ವರ್ಷದ ಯುವತಿ ಹಸೀನಾ ಖತೂನ್ ನಾಪತ್ತೆ…!

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು‌ ಭೇಟಿಯಾದ ಸಂತೋಷ್ ಪೈ…!

ಮಂಗಳೂರಿನಲ್ಲಿ NRAI ಅಧ್ಯಾಯಕ್ಕೆ ಚಾಲನೆ…!

error: Content is protected !!