ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಒಂದು ಕ್ಯಾಂಟರ್ಗೆ ಢಿಕ್ಕಿ ಹೊಡೆದ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ನಡೆದಿದೆ. ಆಂಬುಲೆನ್ಸ್ ಹಾಸನ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಮಾರ್ಗಮಧ್ಯೆ ಕ್ಯಾಂಟರ್ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ ಎನ್ನಲಾಗಿದೆ. ಆಂಬುಲೆನ್ಸ್ನಲ್ಲಿದ್ದ ರೋಗಿ ಹಾಗೂ ಚಾಲಕ ಸೇರಿ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತ ಸಂಭವಿಸುತ್ತಿದ್ದ0ತೆ ಸ್ಥಳಕ್ಕೆ ಸ್ಥಳಿಯರು ತಕ್ಷಣ ನೆರವಿಗೆ ಆಗಮಿಸಿದ್ದು, ಆಂಬುಲೆನ್ಸ್ನಲ್ಲಿದ್ದ ರೋಗಿಯನ್ನು ಸುರಕ್ಷಿತವಾಗಿ ಬೇರೆ ವಾಹನಕ್ಕೆ ಸ್ಥಳಾಂತರಿಸಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಇನ್ನೂ ಢಿಕ್ಕಿಯಬ ತೀವ್ರತೆಗೆ ಆಂಬುಲೆನ್ಸ್ ಮುಂಬಾಗ ಸಂಪೂರ್ಣ ಜಖಂ ಆಗಿದ್ದು, ಕ್ಯಾಂಟರ್ ವಾಹನವೂ ಅಲ್ಪ ಪ್ರಮಾಣದಲ್ಲಿ ಡ್ಯಾಮೇಜ್ ಆಗಿದೆ.



