ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಗಣೇಶ್ ನಾಯಕ್ ಎಂಬವರು ಪೋಲೀಸ್ ಇಲಾಖೆಗೆ ದೂರು ನೀಡಿದ್ದಾರೆ.

ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆಯಲು ದೋಣಿಗಳು ನಿಂತುಕೊಂಡಿದ್ದಲ್ಲದೆ, ಈಗಾಗಲೇ ಅಕ್ರಮವಾಗಿ ತೆಗೆದ ಹತ್ತುಕ್ಕೂ ಆಧಿಕ ಮರಳು ಲೋಡ್ಗಳನ್ನು ದಾಸ್ತಾನು ಮಾಡಲಾಗಿದೆ. ಪಾಣೆಮಂಗಳೂರು ಸೇತುವೆ ಹಾಗೂ ರೈಲ್ವೆ ಸೇತುವೆಯಿಂದ ಕೂಗಳತೆಯ ದೂರದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆಯಾದರೂ ಪೋಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪವನ್ನು ಮಾಡಿದ್ದಾರೆ.

ಪೋಲೀಸ್ ಈಗಾಗಲೇ ಮರಳುಗಾರಿಕೆಯ ಬಗ್ಗೆ ಗಣಿ ಇಲಾಖೆಯವರಿಗೆ ಲಿಖಿತ ದೂರು ನೀಡಿದ್ದು ಅವರ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂಬ ಮಾತನ್ನು ಗಣೇಶ್ ನಾಯಕ್ ಅವರು ತಿಳಿಸಿದ್ದಾರೆ.



