ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ ಮೋರೆಯಲ್ಲಿ ಶಾಲೆ ಕಡೆ ಹೆಜ್ಜೆ ಹಾಕುವ ಮಕ್ಕಳು ಶಾಲೆಯಲ್ಲಿ ಮತ್ತೆ ನಿತ್ಯದ ಪಾಠ ನೋಟ್ಸ್ಗಳಲ್ಲಿ ಒಗ್ಗಿಕೊಳ್ಳಲು ಸ್ವಲ್ಪ ದಿನಗಳಾದರು ಬೇಕೆನ್ನುವುದು ಸಾಮಾನ್ಯ ಸಂಗತಿ. ಮಕ್ಕಳು ಸಂತಸದ ಕಲಿಕೆಯಲ್ಲಿ ಪಾಲ್ಗೊಳ್ಳುವಂತಾಗಬೇಕು ಮತ್ತು ಇಷ್ಟಪಟ್ಟು ಓದಿಕೊಳ್ಳುವಂತಾಗಬೇಕೆನ್ನುವ ಉದ್ದೇಶದಿಂದ ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಮಳೆ ಹಬ್ಬ ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಶಾಲಾ ಹಿರಿಯ ವಿದ್ಯಾರ್ಥಿ ಶ್ರೀಮತಿ ವೀಣಾ ಸರಸ್ವತಿ ಮಾತನಾಡಿ, “ನಮ್ಮ ಜೀವನದ ವ್ಯವಸ್ಥೆಯಲ್ಲಿ ಬಾಲ್ಯದ ಶಾಲಾ ಜೀವನವೆನ್ನುವುದು ಅಮೂಲ್ಯವಾದದು. ಭವಿಷ್ಯವನ್ನು ನಿರ್ಮಾಣ ಮಾಡುವ ಈ ಹಂತದಲ್ಲಿ ಸಂಸ್ಕಾರ ಭರಿತ ಶಿಕ್ಷಣ ಮತ್ತು ಶಿಕ್ಷಕರ ಹಾಗೂ ಹಿರಿಯರ ಮೌಲ್ಯ ತುಂಬಿದ ಹಿತ ನುಡಿಗಳು ವ್ಯಕ್ತಿತ್ವವನ್ನು ಬೆಳೆಸುತ್ತದೆ. ಮಳೆ ಹಬ್ಬದಂತಹ ಪಠ್ಯಪೂರಕ ಶಿಬಿರಗಳು ವಿದ್ಯಾರ್ಥಿಗಳ ಕಲಿಕಾ ಚೈತನ್ಯವನ್ನು ಇಮ್ಮಡಿಗೊಳಿಸುವುದರಲ್ಲಿ ಸಂಶಯವಿಲ್ಲ.” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಿವಶಂಕರ ರಾವ್ ಮಾತನಾಡಿ, “ಶಾಲೆಯ ವಿಶೇಷ ಕಾರ್ಯಕ್ರಮವಾದ ಮಳೆ ಹಬ್ಬವು ವಿದ್ಯಾರ್ಥಿಗಳಲ್ಲಿ ಸಂತಸ ಮತ್ತು ಸಂಭ್ರಮವನ್ನು ಕಟ್ಟಿಕೊಡುವುದರ ಜೊತೆಗೆ ಕಲಿಕೆಯಲ್ಲಿ ತೊಡಗಿಕೊಳ್ಳುವ ಅನುಕೂಲಕರ ವಾತಾವರಣ ನಿರ್ಮಾಣ ಮಾಡಿದೆ.” ಎಂದರು.

ಒಟ್ಟು ಮೂರು ದಿನಗಳ ಕಾಲ ನಡೆದ ಮಳೆಹಬ್ಬದಲ್ಲಿ ಅಂದಾಜು 300 ವಿದ್ಯಾರ್ಥಿಗಳು ಬಹಳ ಆಸಕ್ತಿಯಿಂದ ಭಾಗವಹಿಸಿದರು. ವಿವಿಧ ರೀತಿಯ ಜಾಗೃತಿ ಹಾಡುಗಳು, ಚಪ್ಪಾಳೆಗಳ ವೈವಿಧ್ಯತೆಗಳೊಂದಿಗೆ ಸಂಪನ್ಮೂಲ ವ್ಯಕ್ತಿಯಾದ ಮಕ್ಕಳ ರಂಗಭೂಮಿ ಕಲಾವಿದ ಕೃಷ್ಣಪ್ಪ ಬಂಬಿಲ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತರು.ಕತ್ತಲೆ ಹಾಡು ಖ್ಯಾತಿಯ ನಾದ ಮಣಿನಾಲ್ಕೂರು ವಿದ್ಯಾರ್ಥಿಗಳಲ್ಲಿ ಸಾಧನೆ ಮತ್ತು ಸಾಧ್ಯತೆಗಳ ಕುರಿತಾಗಿ ಅರಿವಿನ ಪಯಣದ ಬುತ್ತಿಯನ್ನು ಹಂಚಿದರು. ವಿವಿಧ ರೀತಿಯ ಹಾಡುಗಳು ಹಾಗೂ ಪ್ರಸಕ್ತ ಬದುಕಿನ ಸುಂದರ ಘಟನೆಗಳನ್ನು ಹೆಣೆಯುತ್ತಾ ವಿದ್ಯಾರ್ಥಿಗಳಿಗೆ ಅರಿವಿನ ಬೆಳಕನ್ನು ಚೆಲ್ಲಿದರು.

ಪರಿಸರ ತ್ಯಾಜ್ಯ ಮತ್ತು ಅದರ ನಿರ್ವಹಣೆ ಕುರಿತಾಗಿ ಹಸಿರು ದಳದ ಸಾಮಾಜಿಕ ಕಾರ್ಯಕರ್ತ ನಾಗರಾಜ್ ಬಜಾಲ್ ಸುಂದರವಾದ ಮಾಹಿತಿಯನ್ನು ಒದಗಿಸಿದರು. ಮನೆಯೊಳಗಿನ ಕಸವನ್ನು ವಿಲೇವಾರಿ ಮಾಡುವ ಬಗೆ ಮತ್ತು ಪರಿಸರದ ಜೊತೆಗಿನ ನಮ್ಮ ನಿಲುವನ್ನು ಬಲಪಡಿಸಬೇಕೆನ್ನುವ ಮಾತುಗಳನ್ನು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು. ಪ್ರಕೃತಿಯ ಉಳಿವಿನಲ್ಲಿ ನಮ್ಮ ಪಾತ್ರದ ಅಗತ್ಯತೆಯನ್ನು ಪ್ರತಿಬಿಂಬಿಸುವ ನೀರು – ಬೇರು ವಿಷಯದ ಕುರಿತಂತೆ ರಾಜ್ಯಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕರಾದ ರಮೇಶ್ ಬಾಯಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ತುಂಬಿದ ಮಾತುಗಳನ್ನಾಡಿದರು. ಸಣ್ಣ ಸಣ್ಣ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಅದರ ಮಹತ್ವದ ಅರಿವನ್ನು ಮೂಡಿಸಿದರು. ಇದೇ ಸಂದರ್ಭದಲ್ಲಿ ಸಭಾ ವೇದಿಕೆಯಲ್ಲಿ ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಮಾಜಿ ಸೈನಿಕರಾದ ರಮೇಶ್ ರಾವ್ ನೂಜಿಪ್ಪಾಡಿ, ಹಿರಿಯ ವಿದ್ಯಾರ್ಥಿ ಹಾಗೂ ನಿವೃತ್ತ ಶಿಕ್ಷಕರಾದ ಶ್ರೀಮತಿ ದೇವಕಿ ಎಚ್, ನಿವೃತ್ತ ಶಿಕ್ಷಕಿಯಾದ ಶ್ರೀಮತಿ ಅನುಸೂಯ ರಾವ್, ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಶೀಲ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಹಿಂದಿ ಭಾಷಾ ಶಿಕ್ಷಕಿ ಶ್ರೀಮತಿ ಶಾಂತ ಎಸ್ ಸ್ವಾಗತಿಸಿದರು. ಕಲಾ ಶಿಕ್ಷಕ ಶ್ರೀ ಜಗನ್ನಾಥ್ ವಂದಿಸಿದರು ಚಿತ್ರಕಲಾವಿದ ತಾರಾನಾಥ ಕೈರಂಗಳ ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!