ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಕೆಂಗೇರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಮೃತರನ್ನು ಬಿಜಿಎಸ್ ಕಾಲೇಜಿನ ನಾಲ್ಕನೇ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳಾದ ಅತುಲ್ ಸಿ.ಬಿ. ಹಾಗೂ ಗೌರಿ ಶಂಕರ್ ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ಜಾವ ಸುಮಾರು 2 ಗಂಟೆ ವೇಳೆಗೆ ಕೆಂಗೇರಿಯ ಆರ್.ಆರ್. ದಂತ ಕಾಲೇಜು ಸಮೀಪ ಈ ದುರ್ಘಟನೆ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದ್ದು, ಪರೀಕ್ಷೆಯ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು. ಈ ಕುರಿತು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ

Leave a Reply

Your email address will not be published. Required fields are marked *

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

ಬಂಟ್ವಾಳ: ಐದಾರು ತಿಂಗಳಿನಿಂದ ವಿಪರೀತ ಕುಡಿತದ ಚಟಕ್ಕೆ ಬಿದ್ದ ವ್ಯಕ್ತಿ ನಾಪ*ತ್ತೆ….!

ಬಂಟ್ವಾಳ: ತಂದೆ ತಾಯಿ ಕೆಲಸಕ್ಕೆ ಹೋದ ವೇಳೆ ಚಿನ್ನಾಭರಣ ಸಹಿತ ಮಗಳು ನಾಪತ್ತೆ…!

ಬಂಟ್ವಾಳ: ವಾರೆಂಟ್ ಆರೋಪಿ ಕಾವಳಪಡೂರು ನಿವಾಸಿ ನಜಿರ್ ಅಹ್ಮದ್ ಬಂಧನ…!

ಬಂಟ್ವಾಳ: ರಸ್ತೆಯಲ್ಲಿ ರಾಶಿ ಹಾಕಲಾಗಿದ್ದ ಕಾಂಕ್ರೀಟ್ ತುಂಡುಗಳಿಂದ ರಸ್ತೆ ಅಪಘಾತ…!

ಮಂಗಳೂರು: ಶಾಲೆ-ಅಂಗನವಾಡಿಗಳ ನೀರು ಪರೀಕ್ಷೆ ಕಡ್ಡಾಯ…!

error: Content is protected !!