ಜನ ಮನದ ನಾಡಿ ಮಿಡಿತ

Advertisement

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ ಸೇವೆ ಮೂಲಕ ಮಣ್ಣು ಜಲ್ಲಿಕಲ್ಲುಗಳನ್ನು ತುಂಬಿಸಿ ಸಂಚಾರ ಅನುಕೂಲ ಮಾಡಿ ಮಾದರಿ ಕಾರ್ಯ ಮಾಡಿದ್ದಾರೆ.

ಈ ರಸ್ತೆಯ ಗೋಳಿತ್ತಡಿಯಿಂದ ತ್ರೀವೇಣಿ ಸರ್ಕಲ್ ತನಕದ ಸುಮಾರು 2.5 ಕಿಮೀ ದೂರದ ತನಕ ಹೆಚ್ಚು ಹೊಂಡಗಳು ನಿರ್ಮಾಣವಾಗಿ ಸಂಚಾರ ಅಯೋಗ್ಯವಾಗಿತ್ತು. ಹೀಗಾಗಿ ಕೊಯಿಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಿದಾನಂದ ಪಾನ್ಯಾಲು ಮುಂದಾಳುತ್ವದಲ್ಲಿ ರಸ್ತೆ ದುರಸ್ತಿಗಾಗಿ ವಾಟ್ಸ್ ಆಪ್ ಗ್ರೂಪ್ ರಚಿಸಿ ಆರ್ಥಿಕ ಸಹಾಯ ನೀಡುವಂತೆ ಯಾಚಿಸಲಾಗಿತ್ತು. ಹಲವು ದಾನಿಗಳ ಹಣ ಸೇರಿದಂತೆ ಇನ್ನಿತರ ರೂಪದಲ್ಲಿ ಸಹಾಯ ಮಾಡಿದ್ದಾರೆ. ಕಳೆದ ಬುಧವಾರ ಯಂತ್ರದ ಮೂಲಕ ರಸ್ತೆ ಇಕ್ಕೆಡೆಗಳಲ್ಲಿದ್ದ ಪೊದರು, ಮರಗಳ ತೆರವು, ಚರಂಡಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಭಾನುವಾರದ ತನಕ ಮುಂದುವರಿದಿತ್ತು. ಜೊತೆಗೆ ಭಾನುವಾರ ಸ್ಥಳಿಯರು ಶ್ರಮ ಸೇವೆಯ ಮೂಲಕ ಹೊಂಡ ಮುಚ್ಚುವ ಕಾರ್ಯ ನಡೆಸಿದ್ದಾರೆ. ಬೆಳಿಗ್ಗೆಯಿಂದ ಆರಂಭವಾದ ಶ್ರಮದಾನ ಸಂಜೆಯವರೆಗೂ ಸಾಗಿತ್ತು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!