ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ ಕುಳಿತುಕೊಳ್ಳಬೇಕಾದ ಸ್ಥಿತಿಯೊಂದು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಎಂಬಲ್ಲಿ ನಡೆದಿದೆ.

ಹಲವು ಗ್ರಾಮಗಳನ್ನು ಸಂಪರ್ಕಿಸುತ್ತಿದ್ದ ತಾರಬಳಿ ಸಂಪರ್ಕ ಸೇತುವೆ ಕುಸಿತ ಕಂಡ ಕಾರಣದಿಂದ, ನಿತ್ಯ ಇದನ್ನೇ ನಂಬಿ ಸಂಚರಿಸುತ್ತಿದ್ದ ನೂರಾರು ಜನರು ದಿಕ್ಕು ತೋಚದಂತಾಗಿ ಕಂಗಲಾಗಿದ್ದಾರೆ. ತಾರಬಳಿ ಸೇತುವೆ ಕುಸಿತದ ಬಳಿಕ ಇದೀಗ ಕಿರಲೆ, ಭಟ್ಟಾಜೆ, ಸೊರ್ನಾಡು, ಎರ್ಮಲಪದವು, ಕುರಿಯಾಳ, ಬಾಳಿಕೆ, ಬಂಡಸಾಲೆ ಸೇತುವೆಯ ಒಂದು ಕಡೆಯಾದರೆ, ಕೊಳತ್ತಮಜಲು, ಬಡಗಬೆಳ್ಳೂರು, ಪೊಳಲಿ ಮತ್ತೊಂದು ಕಡೆ. ಈ ಎರಡೂ ಕಡೆಯ ಸಂಪರ್ಕಕ್ಕೆ ತಾರಬಳಿ ಸೇತುವೆಯೇ ಆಧಾರ.

ಆದರೆ, ಗ್ರಾಮೀಣ ಜನರ ನಿತ್ಯ ಓಡಾಟದ ಕೊಂಡಿ ಇಲ್ಲಿ ಕೈ ತಪ್ಪಿದೆ. ಬಂಟ್ವಾಳ ತಾಲೂಕು ಬಡಗ ಬೆಳ್ಳೂರು ಗ್ರಾಮದ ಭಟ್ಟಾಜೆ ಎಂಬಲ್ಲಿನ ತಾರಬಳಿ ಸೇತುವೆ ಕಳೆದ ಕೆಲವು ತಿಂಗಳಿನಿಂದ ಅಪಾಯಕಾರಿಯ ಕರೆ ಘಂಟೆ ಬಾರಿಸಿ, ಸಂಬಂಧಿಸಿವರ ಗಮನ ಸೆಳೆದಿತ್ತು. ಹೀಗಾಗಿ ಸೇತುವೆಯ ಮೂಲಕ ಘನವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಕೇವಲ ಲಘು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಸಂಚಾರ ನಿಯಂತ್ರಣಕ್ಕಾಗಿ ಪಂಚಾಯತ್ ವತಿಯಿಂದ ಎರಡೂ ರಸ್ತೆಯ ಕಡೆಯಲ್ಲಿ ಕಲ್ಲಿನ ಗೋಡೆ ಕಟ್ಟಿ ಘನ ವಾಹನಗಳಿಗೆ ನಿಯಂತ್ರಣ ಹೇರಲಾಗಿತ್ತು. ದಿನಕಳೆದಂತೆ ಸೇತುವೆ ಮತ್ತಷ್ಟು ಅಪಾಯಕಾರಿಯಾಗಿ ಬದಲಾಗುತ್ತಿರುವುದು ಕಂಡ ಸ್ಥಳೀಯರು ಜೀವ ಬಲಿಯಾಗುವ ಮುನ್ನ ಸೇತುವೆ ತೆರವು ಮಾಡುವಂತೆ ಒತ್ತಾಯ ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

error: Content is protected !!