ಜನ ಮನದ ನಾಡಿ ಮಿಡಿತ

Advertisement

ದೇರಳಕಟ್ಟೆ, ಕಟಪಾಡಿಯಲ್ಲಿ ಎಂಸಿಸಿ ಬ್ಯಾಂಕ್‌ನ ಹೊಸ ಶಾಖೆಗಳು ಶೀಘ್ರವೇ ಆರಂಭ : ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ…!

ಮಂಗಳೂರು:

114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ನ 22ನೇ ಶಾಖೆ ದೇರಳಕಟ್ಟೆಯಲ್ಲಿ ಜೂನ್ 28ರಂದು ಹಾಗೂ 23ನೇ ಶಾಖೆ ಉಡುಪಿಯ ಕಟಪಾಡಿಯಲ್ಲಿ ಆಗಸ್ಟ್ 2ರಂದು ಉದ್ಘಾಟನೆಯಾಗಲಿದೆ.

 

ದೇರಳಕಟ್ಟೆ ಶಾಖೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ಇದೇ ಸಂದರ್ಭದಲ್ಲಿ ಬ್ಯಾಂಕಿನ 16ನೇ ಎಟಿಎಂ ಕೂಡ ಕಾರ್ಯಾರಂಭ ಮಾಡಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದರು .

ನಗರದ ಎಂಸಿಸಿ ಬ್ಯಾಂಕಿನ‌ ಪ್ರಧಾನ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , 2025-26ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ಗಮನಾರ್ಹ ಸಾಧನೆ ದಾಖಲಿಸಿದ್ದು, ಒಟ್ಟು ವ್ಯವಹಾರ ವಹಿವಾಟು 22.89 ಶೇಕಡಾ ಏರಿಕೆಯೊಂದಿಗೆ 1,535 ಕೋಟಿ ರೂ. ಮೈಲಿಗಲ್ಲು ತಲುಪಿದೆ . ಬ್ಯಾಂಕಿನ ನಿವ್ವಳ ಮೌಲ್ಯ 83.76 ಕೋಟಿ ರೂ.ಗಳಿಂದ 91.80 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಎನ್‌ಆರ್‌ಐ ಗ್ರಾಹಕರ ಬೆಂಬಲ ಬ್ಯಾಂಕಿನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದರು .

2018ರಲ್ಲಿ ಪ್ರಸ್ತುತ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ಬಳಿಕ ಬ್ಯಾಂಕ್ ವೇಗದ ಬೆಳವಣಿಗೆಯ ಹಾದಿಯಲ್ಲಿದ್ದು, ಠೇವಣಿಗಳು 304 ಕೋಟಿ ರೂ.ಗಳಿಂದ 876 ಕೋಟಿ ರೂ.ಗಳಿಗೆ, ಸಾಲ ಮತ್ತು ಮುಂಗಡಗಳು 191 ಕೋಟಿ ರೂ.ಗಳಿಂದ 657 ಕೋಟಿ ರೂ.ಗಳಿಗೆ ಹಾಗೂ ಷೇರು ಬಂಡವಾಳ 13 ಕೋಟಿ ರೂ.ಗಳಿಂದ 34 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಒಟ್ಟು ವ್ಯವಹಾರ ವಹಿವಾಟು 496 ಕೋಟಿ ರೂ.ಗಳಿಂದ 1,535 ಕೋಟಿ ರೂ.ಗಳಿಗೆ ತಲುಪಿದ್ದು, 209 ಶೇಕಡಾ ಬೆಳವಣಿಗೆ ದಾಖಲಿಸಿದೆ ಎಂದರು.

ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಸಂಪೂರ್ಣ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲಾಗಿದ್ದು, ಕೋರ್ ಬ್ಯಾಂಕಿಂಗ್ ತಂತ್ರಜ್ಞಾನದ ಮೂಲಕ ಗ್ರಾಹಕರಿಗೆ ಸೇವೆ ಒದಗಿಸಲಾಗುತ್ತಿದೆ. ಖಾಸಗಿ ಹಾಗೂ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಸಮಾನವಾದ ವಿವಿಧ ಹಣಕಾಸು ಉತ್ಪನ್ನಗಳು ಮತ್ತು ಸೇವೆಗಳನ್ನು ಬ್ಯಾಂಕ್ ನೀಡುತ್ತಿದೆ ಎಂದು ಅವರು ತಿಳಿಸಿದರು.

ಮೊರ್ಗನ್ಸ್ ಗೇಟ್ ಶಾಖೆಯನ್ನು ಜುಲೈ 25ರಂದು, ಮೂಡಬಿದಿರೆ ಶಾಖೆಯನ್ನು ಆಗಸ್ಟ್ 22ರಂದು ಹೊಸ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು. ಕಾರ್ಕಳ ಶಾಖೆಯನ್ನು ಆಗಸ್ಟ್ 26ರಂದು ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸುವ ಯೋಜನೆಯೂ ಇದೆ ಎಂದು ತಿಳಿಸಿದರು.

ಎಂಸಿಸಿ ಬ್ಯಾಂಕ್ ಶಿಕ್ಷಣ ಸಾಲ, ಎಂಎಸ್‌ಎಂಇ ಸಾಲ, ವಾಹನ ಸಾಲ, ಗೃಹ ಸಾಲ ಹಾಗೂ ಚಿನ್ನದ ಸಾಲ ಸೇರಿದಂತೆ ವಿವಿಧ ಹಣಕಾಸು ಸೇವೆಗಳನ್ನು ಒದಗಿಸುತ್ತಿದ್ದು, ಉಚಿತ ಎಟಿಎಂ ಹಾಗೂ ಮೊಬೈಲ್ ಬ್ಯಾಂಕಿಂಗ್ ಸೇವೆಗಳನ್ನೂ ನೀಡುತ್ತಿದೆ. ಬ್ಯಾಂಕಿನ ಠೇವಣಿಗಳು ಡಿಐಸಿಜಿಸಿ ವಿಮಾ ವ್ಯಾಪ್ತಿಯಲ್ಲಿವೆ ಎಂದು ಅವರು ವಿವರಿಸಿದರು.

.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ, ನಿರ್ದೇಶಕರಾದ ಆ್ಯಂಡ್ ಡಿಸೋಜಾ, ಡಾ. ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜಿ.ಪಿ. ‘ರೊಡ್ರಿಗಸ್, ಡೇವಿಡ್ ಡಿಸೋಜಾ, ಎಲ್ಯಾಯ್ ಕಿರಣ್ ಕ್ರಾಸ್ಕೊ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ. ಪಿಂಟೊ, ಸುಶಾಂತ್ ಸಲ್ಮಾನ್ಯಾ, ಐರಿನ್ ರೆಬೆಲ್ಲೊ, ಡಾ. ಫ್ರೀಡಾ ಡಿಸೋಜಾ, ಆಲ್ವಿನ್ ಮೊಂತೇರೊ, ಫೆಲಿಕ್ಸ್ ಡಿಕ್ರೂಜ್, ಶರ್ಮಿಳಾ ಮಿನೇಜಸ್ ಹಾಗೂ ಪ್ರಧಾನ ವ್ಯವಸ್ಥಾಪಕ ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!