ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಗಳ ತೆರವು ಕಾರ್ಯಾಚರಣೆಗೆ ಬಿಜೆಪಿ ಟೀಕೆ ವ್ಯಕ್ತಪಡಿಸಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ಸಭೆಯಲ್ಲಿ ಒಪ್ಪಿಗೆ ಸೂಚಿಸಿದ್ದ ಬಿಜೆಪಿ ನಾಯಕರು ಈಗ ರಾಜಕೀಯ ಲಾಭಕ್ಕಾಗಿ ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬೆಂಗಳೂರು ನಗರದಲ್ಲಿ ಪಾದಚಾರಿಗಳಿಗೆ ಸುರಕ್ಷಿತ ಮತ್ತು ಸುಗಮ ಸಂಚಾರ ಕಲ್ಪಿಸುವುದು ಹಾಗೂ ಬೀದಿಬದಿ ವ್ಯಾಪಾರಿಗಳ ಹಿತವನ್ನು ಕಾಪಾಡುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಸಿಎಂ ಹೇಳಿದ್ದಾರೆ. ನಗರವನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದಲೇ ಪಾದಚಾರಿ ಮಾರ್ಗಗಳನ್ನು ಅತಿಕ್ರಮಣ ಮುಕ್ತಗೊಳಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.



