ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು ಸೈಬರ್ ವಂಚನೆಗೆ ಬಳಸಲು ಸಹಕರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಜುಬೈರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಜುಲೈ 3ರಂದು ಜಿಲ್ಲಾ ಸೈಬರ್ ಅಪರಾಧ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.



