ಜನ ಮನದ ನಾಡಿ ಮಿಡಿತ

Advertisement

ದೆಹಲಿ: ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಣೆಗೆ ತೊಂದರೆ; ರೈತ-ವ್ಯಾಪಾರಿಗಳ ಹಿತ ರಕ್ಷಣೆಗೆ ಸಿಎಂ ಭೇಟಿ…!

ಮಹಾರಾಷ್ಟ್ರ ರಾಜ್ಯದಲ್ಲಿ ಕಾನೂನುಬದ್ಧವಾಗಿ ಸಾಗಣೆಯಾಗುತ್ತಿರುವ ಅಡಿಕೆ ವಾಹನಗಳ ಸಂಚಾರಕ್ಕೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ನಿಯೋಗ ಭೇಟಿ ಮಾಡಿ, ರೈತರು, ಅಡಿಕೆ ಬೆಳೆಗಾರರು ಹಾಗೂ ವ್ಯಾಪಾರಿಗಳ ಹಿತಾಸಕ್ತಿಯನ್ನು ಕಾಪಾಡಲು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದೆ.

ದಕ್ಷಿಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾದ ಅಡಿಕೆಯು ಸಾವಿರಾರು ರೈತರ ಜೀವನಾಧಾರವಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಮಹಾರಾಷ್ಟ್ರ ಸೇರಿದಂತೆ ದೇಶದ ಹಲವು ರಾಜ್ಯಗಳಿಗೆ ಅಡಿಕೆ ಸಾಗಾಟ ನಡೆಯುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಹಾರಾಷ್ಟ್ರದ ಕೆಲ ಪ್ರದೇಶಗಳಲ್ಲಿ ಅಡಿಕೆ ಸಾಗಣೆ ವಾಹನಗಳಿಗೆ ಅನಗತ್ಯ ತಪಾಸಣೆ, ವಿಳಂಬ ಹಾಗೂ ಸಂಚಾರದ ಅಡಚಣೆಗಳು ಉಂಟಾಗುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿವೆ.

ಇದರಿಂದ ರೈತರು, ವ್ಯಾಪಾರಿಗಳು, ಸಾಗಣಿದಾರರು ಹಾಗೂ ಅಡಿಕೆ ಆಧಾರಿತ ವ್ಯಾಪಾರ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ನಿಯೋಗ ಮುಖ್ಯಮಂತ್ರಿಗಳ ಗಮನಕ್ಕೆ ತಂದಿತು. ಕಾನೂನುಬದ್ಧ ದಾಖಲೆಗಳೊಂದಿಗೆ ಸಾಗಣೆಯಾಗುತ್ತಿರುವ ಅಡಿಕೆ ವಾಹನಗಳಿಗೆ ಯಾವುದೇ ರೀತಿಯ ಅನಗತ್ಯ ತೊಂದರೆ ಉಂಟಾಗದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಅಂತರರಾಜ್ಯ ವ್ಯಾಪಾರಕ್ಕೆ ಅಡ್ಡಿಯಾಗದಂತೆ ಅಗತ್ಯ ಕ್ರಮ ಕೈಗೊಂಡು ರೈತರು ಮತ್ತು ವ್ಯಾಪಾರಿಗಳ ಹಿತಾಸಕ್ತಿಯನ್ನು ರಕ್ಷಿಸಬೇಕು ಎಂದು ನಿಯೋಗ ಮನವಿ ಮಾಡಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!