ಜನ ಮನದ ನಾಡಿ ಮಿಡಿತ

Advertisement

ಕೋಝಿಕ್ಕೋಡ್: ಕೋಝಿಕ್ಕೋಡ್ ರೈಲು ನಿಲ್ದಾಣದಲ್ಲಿ ಗಡಿಯಾರ ಗೋಪುರ ಕುಸಿತ..!

ಕೇರಳದ ಐತಿಹಾಸಿಕ ಕೋಝಿಕ್ಕೋಡ್ ರೈಲು ನಿಲ್ದಾಣದಲ್ಲಿ ನವೀಕರಣ ಕಾಮಗಾರಿ ವೇಳೆ ಶತಮಾನ ಹಳೆಯ ಗಡಿಯಾರ ಗೋಪುರ ಗುರುವಾರ ಏಕಾಏಕಿ ಕುಸಿದಿದ್ದು, ಭಾರೀ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.

ಘಟನೆ ವೇಳೆ ಯಾವುದೇ ಪ್ರಯಾಣಿಕರು ಸಮೀಪದಲ್ಲಿರದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಎರಡನೇ ಪ್ಲಾಟ್‌ಫಾರ್ಮ್ ಸಮೀಪದಲ್ಲಿದ್ದ ಗೋಪುರ ಪುನರ್‌ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಎರಡು ಭಾಗಗಳಾಗಿ ಒಡೆದು ಮೂರನೇ ರೈಲು ಹಳಿಯ ಮೇಲೆ ಹಾಗೂ ಪ್ಲಾಟ್‌ಫಾರ್ಮ್ನ ಭಾಗದ ಮೇಲೆ ಕುಸಿದು ಬಿದ್ದಿದೆ. ಘಟನೆ ಸಂಭವಿಸಿದ ವೇಳೆ ಮೂರನೇ ಹಳಿಯಲ್ಲಿ ರೈಲು ನಿಂತಿದ್ದರೂ, ಅವಶೇಷಗಳು ರೈಲಿನ ಪಕ್ಕಕ್ಕೆ ಬಿದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಹಳೆಯ ಕಟ್ಟಡ ದುರ್ಬಲಗೊಂಡಿದ್ದು, ಇದೇ ಕುಸಿತಕ್ಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಳೆ ಮತ್ತು ತೇವಾಂಶದಿಂದ ಕಟ್ಟಡದ ಬಲ ಕುಂದಿದಿತ್ತೇ ಎಂಬ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಬಳಿಕ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅವಶೇಷಗಳನ್ನು ತೆರವುಗೊಳಿಸಿದ್ದು, ಅವಶೇಷಗಳಡಿ ಯಾರೂ ಸಿಲುಕಿಲ್ಲ ಎಂದು ಖಚಿತಪಡಿಸಿದ್ದಾರೆ. ರೈಲ್ವೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು ರೂ.450 ಕೋಟಿ ವೆಚ್ಚದಲ್ಲಿ ಕೋಝಿಕ್ಕೋಡ್ ರೈಲು ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸುವ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಗೋಪುರ ಕುಸಿದಿರುವುದು ಕಾಮಗಾರಿ ಸುರಕ್ಷತೆ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನವೀಕರಣ ಮತ್ತು ನೆಲಸಮ ಕಾಮಗಾರಿಗಳನ್ನು ಸುರಕ್ಷತಾ ನಿಯಮಾನುಸಾರವೇ ನಡೆಸಲಾಗುತ್ತಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!