ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಲಾವಣ್ಯ ಕೊಲೆ ಪ್ರಕರಣಕ್ಕೆ ಬಿಗ್ ಬ್ರೇಕ್: ಚೇತನ್ ಗೌಡ ಬಂಧನ..!

ಲಾವಣ್ಯ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಪರಾರಿಯಾಗಿದ್ದ ಪ್ರಮುಖ ಆರೋಪಿ ಚೇತನ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ಬಳಿಕ ಆರೋಪಿಯನ್ನು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆ ಕೃತ್ಯ ಎಸಗಿದ ಬಳಿಕ ಆತ ವಿಷಪದಾರ್ಥ ಸೇವಿಸಿರಬಹುದೆಂಬ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಆರೋಪಿಯ ಆರೋಗ್ಯ ಸ್ಥಿತಿ ಕುರಿತು ವೈದ್ಯರು ನಿಗಾ ವಹಿಸಿದ್ದು, ಪರೀಕ್ಷೆಯ ವರದಿ ಬಂದ ಬಳಿಕ ಸ್ಪಷ್ಟ ಚಿತ್ರಣ ಲಭ್ಯವಾಗುವ ಸಾಧ್ಯತೆಯಿದೆ. ಇನ್ನೊಂದೆಡೆ, ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಕೊಲೆ ನಡೆದ ಸಂದರ್ಭದ ವಿವರಗಳು, ಆರೋಪಿಯ ಚಲನವಲನಗಳು ಹಾಗೂ ಘಟನೆಯ ಹಿನ್ನಲೆ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ವೈದ್ಯಕೀಯ ವರದಿ ಮತ್ತು ಆರೋಪಿಯ ವಿಚಾರಣೆಯ ಬಳಿಕ ಪ್ರಕರಣಕ್ಕೆ ಸಂಬAಧಿಸಿದ ಮತ್ತಷ್ಟು ಮಹತ್ವದ ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!