ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ ಆತಂಕ ಎದುರಾಗಿದೆ.

ಮನೆ ಮನೆಗಳಿಂದ ಸಂಗ್ರಹವಾಗುವ ಘನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ರಸ್ತೆ ಬದಿ ಹಾಗೂ ನದಿ ತೀರದಲ್ಲಿ ರಾಶಿ ಹಾಕಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಕಂಚಿನಡ್ಕದಲ್ಲಿರುವ ಡಂಪಿಂಗ್ ಯಾರ್ಡ್ಗೆ ಸಾಗಿಸಬೇಕಾದ ತ್ಯಾಜ್ಯವನ್ನು ನೇತ್ರಾವತಿ ಸೇತುವೆ ಕೆಳಭಾಗದ ಕಂಚಿಕಾರ್ ಪೇಟೆ ರಸ್ತೆ ಸಮೀಪ ರಾಶಿ ಹಾಕಲಾಗಿದ್ದು, ಕೊಳೆತ ತ್ಯಾಜ್ಯದಿಂದ ದುರ್ವಾಸನೆ ವ್ಯಾಪಿಸಿದೆ. ಮಳೆಗಾಲದಲ್ಲಿ ಈ ತ್ಯಾಜ್ಯದಿಂದ ಹೊರಬರುವ ಕೊಳಕು ನೀರು ನೇರವಾಗಿ ನೇತ್ರಾವತಿ ನದಿಗೆ ಸೇರುತ್ತಿದ್ದು, ಪರಿಸರ ಮಾಲಿನ್ಯದ ಜೊತೆಗೆ ಸಾರ್ವಜನಿಕ ಆರೋಗ್ಯಕ್ಕೂ ಗಂಭೀರ ಅಪಾಯ ಉಂಟುಮಾಡುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ನೇತ್ರಾವತಿ ನದಿಯ ನೀರನ್ನೇ ಶುದ್ಧೀಕರಿಸಿ ಮಂಗಳೂರು ಮಹಾನಗರ ಸೇರಿದಂತೆ ಸಾವಿರಾರು ಜನರಿಗೆ ಕುಡಿಯುವ ನೀರಾಗಿ ಪೂರೈಕೆ ಮಾಡಲಾಗುತ್ತದೆ. ಇಂತಹ ಮಹತ್ವದ ನದಿಗೆ ತ್ಯಾಜ್ಯ ಮಿಶ್ರಿತ ನೀರು ಸೇರುತ್ತಿರುವುದು ಅತ್ಯಂತ ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಬಂಟ್ವಾಳ ಪುರಸಭೆಯ ಮನೆ ಮನೆಯ ಕಸ ಸಂಗ್ರಹ ಸೇವೆಯೂ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಸ ಸಂಗ್ರಹಕ್ಕೆ ಬಳಸುವ ಸುಮಾರು ಹತ್ತು ವಾಹನಗಳ ಪೈಕಿ ಏಳು ವಾಹನಗಳು ದುರಸ್ತಿಯಲ್ಲಿದ್ದು, ಕೇವಲ ಮೂರು ವಾಹನಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ ಎನ್ನಲಾಗಿದೆ. ಇದರಿಂದ ಹಲವಾರು ವಾರ್ಡ್ಗಳಲ್ಲಿ ದಿನಗಳ ಕಾಲ ಕಸ ಸಂಗ್ರಹವಾಗದೆ ರಸ್ತೆ ಬದಿಯಲ್ಲೇ ರಾಶಿಯಾಗುತ್ತಿದ್ದು, ದುರ್ವಾಸನೆ ಹಾಗೂ ಸೊಳ್ಳೆ-ನೊಣಗಳ ಕಾಟ ಹೆಚ್ಚಾಗಿದೆ. ಮಳೆಗಾಲದಲ್ಲಿ ಕೊಳೆತ ತ್ಯಾಜ್ಯದಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದ್ದು, ಮಕ್ಕಳು, ವೃದ್ಧರು ಹಾಗೂ ಸಾರ್ವಜನಿಕರು ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಪರಿಸ್ಥಿತಿ ಹದಗೆಡುತ್ತಿದ್ದರೂ ಪುರಸಭೆ ಆಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಈ ಕುರಿತು ಸಾಮಾಜಿಕ ಹೋರಾಟಗಾರ ಗೋವಿಂದ ಪ್ರಭು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, “ಕಳೆದ ಹಲವು ದಿನಗಳಿಂದ ತ್ಯಾಜ್ಯ ನಿರ್ವಹಣೆ ಸಂಪೂರ್ಣ ವಿಫಲವಾಗಿದೆ. ರಸ್ತೆ ಬದಿಯಲ್ಲಿ ಕೊಳೆತ ಕಸದ ರಾಶಿ ಬಿದ್ದಿದ್ದು, ಅದರಿಂದ ಹೊರಬರುವ ಕೊಳಕು ನೀರು ನೇತ್ರಾವತಿ ನದಿಗೆ ಸೇರುತ್ತಿದೆ. ಇದು ಪರಿಸರಕ್ಕೂ ಸಾರ್ವಜನಿಕ ಆರೋಗ್ಯಕ್ಕೂ ದೊಡ್ಡ ಅಪಾಯ. ಆರೋಗ್ಯ ಸಚಿವರ ಉಸ್ತುವಾರಿ ಜಿಲ್ಲೆಯಲ್ಲೇ ಇಂತಹ ದುಸ್ಥಿತಿ ನಿರ್ಮಾಣವಾಗಿರುವುದು ದುರದೃಷ್ಟಕರ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ. ಸ್ಥಳೀಯರ ಆರೋಪದಂತೆ, ಸಮಸ್ಯೆ ಬಗ್ಗೆ ಹಲವು ಬಾರಿ ಗಮನ ಸೆಳೆದಿದ್ದರೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಶಾಶ್ವತ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡಿಲ್ಲ. ವಾಹನಗಳ ದುರಸ್ತಿ, ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಹಾಗೂ ಸ್ವಚ್ಛತಾ ವ್ಯವಸ್ಥೆ ಸುಧಾರಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವೇ ಇಂದಿನ ದುಸ್ಥಿತಿಗೆ ಪ್ರಮುಖ ಕಾರಣವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ತಕ್ಷಣವೇ ನದಿ ತೀರದಲ್ಲಿ ರಾಶಿಯಾಗಿರುವ ತ್ಯಾಜ್ಯವನ್ನು ತೆರವುಗೊಳಿಸಿ, ಮನೆ ಮನೆ ಕಸ ಸಂಗ್ರಹ ವ್ಯವಸ್ಥೆಯನ್ನು ಸುಗಮಗೊಳಿಸುವ ಜೊತೆಗೆ ತ್ಯಾಜ್ಯ ನಿರ್ವಹಣೆಯನ್ನು ವೈಜ್ಞಾನಿಕವಾಗಿ ನಡೆಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ನಾಗರಿಕರು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!