ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣದ ಬಳಿ ನಡೆದಿದೆ.

ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಖಾಸಗಿ ತಡೆ ರಹಿತ ಬಸ್ ಮುಲ್ಕಿ ಬಸ್ ನಿಲ್ದಾಣ ತಲುಪುತ್ತಿದ್ದಂತೆ ಚಾಲಕನ ನಿರ್ಲಕ್ಷದ ಚಾಲನೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇನ್ನು ಅಪಘಾತದಿಂದ ಇಬ್ಬರು ಚಾಲಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೂಡಲೇ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಎರಡು ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ಕಾರು ಚಾಲಕ ದೀರಜ್ ಶೆಟ್ಟಿ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



