ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ ರಾತ್ರಿ ಮನೆ ಸಮೀಪ ತುಂಬಿ ಹರಿಯುತ್ತಿರುವ ತೋಡಿನ ಬಳಿ ಕಂಡುಬಂದಿದ್ದು ಅವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾತ್ರಿಯಿಂದಲೇ ಶೋಧ ಕಾರ್ಯ ನಡೆಯುತ್ತಿತ್ತು.

ಇದೀಗ ಅರಳ ಗ್ರಾಮದ ಪಂಬದಗದ್ದೆ ಎಂಬಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಶನಿವಾರ ರಾತ್ರಿ ಸಂಭವಿಸಿದ ಘಟನೆಯ ಬಳಿಕ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್ ತಂಡಗಳು ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಿದ್ದವು. ಮಳೆ ಹಾಗೂ ನೀರಿನ ಹರಿವು ಹೆಚ್ಚಿದ್ದ ಕಾರಣ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದ್ದರೂ ಶೋಧ ಮುಂದುವರಿಸಲಾಗಿತ್ತು. ಸೋಮವಾರ ಬೆಳಿಗ್ಗೆ ಅರಳ ಗ್ರಾಮದ ಪಂಬದಗದ್ದೆ ಸಮೀಪದ ನೀರಿನಲ್ಲಿ ಜೀವನ್ ಪಿಂಟೋ ಅವರ ಮೃತದೇಹ ಪತ್ತೆಯಾಗಿದೆ ಎಂದು ಎನ್‌ಡಿಆರ್‌ಎಫ್ ತಂಡ ಮಾಹಿತಿ ನೀಡಿದೆ.

ಮೃತದೇಹವನ್ನು ಮೇಲಕ್ಕೆತ್ತಿ ಮುಂದಿನ ಕಾನೂನು ಪ್ರಕ್ರಿಯೆಗಾಗಿ ಸಂಬಂಧಿತ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲದಲ್ಲಿ ನದಿ, ಹೊಳೆ ಹಾಗೂ ತೋಡುಗಳ ನೀರಿನ ಹರಿವು ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಇನ್ನು ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೀವನ್ ಪಿಂಟೋ ಅವರು ತಮ್ಮ ಮನೆಯಿಂದ ಸ್ವಲ್ಪವೇ ದೂರದಲ್ಲಿರುವ ಮಾವನ ಮನೆಗೆ ಆಗಸ್ಟ್ 1ರ ರಾತ್ರಿ ಸುಮಾರು 7.30ರ ವೇಳೆ ನಡೆದುಕೊಂಡು ಹೋಗುವುದಾಗಿ ಹೊರಟಿದ್ದರು. ಧಾರಾಕಾರ ಮಳೆ ಹಾಗೂ ಕತ್ತಲು ಇರುವ ಹಿನ್ನೆಲೆಯಲ್ಲಿ ಟಾರ್ಚ್ ಹಿಡಿದುಕೊಂಡು ತೋಡಿನ ಮೇಲೆ ಹಾಕಲಾಗಿರುವ ಮಿನಿಸೇತುವೆ ಯ ಮೇಲೆ ನಡೆದುಕೊಂಡು ಇನ್ನೊಂದು ಬದಿಗೆ ತಲುಪಬೇಕಿತ್ತು. ಆದರೆ ಅವರು ಎಷ್ಟು ಹೊತ್ತಾದರೂ ತಲುಪದ ಹಿನ್ನೆಲೆ ಮಾಹಿತಿ ತಿಳಿದು ಹುಡುಕಾಟ ಆರಂಭಿಸಿದಾಗ, ಅವರ ಚಪ್ಪಲಿ ಮತ್ತು ಟಾರ್ಚ್ ತೋಡಿನಲ್ಲಿ ಪತ್ತೆಯಾಗಿದೆ. ಸಮೀಪವರ್ತಿಗಳನ್ನೆಲ್ಲಾ ವಿಚಾರಿಸಿ, ಹುಡುಕಾಟ ನಡೆಸಿದಾಗ ಅವರು ಕಂಡುಬಾರದ ಹಿನ್ನೆಲೆಯಲ್ಲಿ ತೋಡಿನಲ್ಲಿ ಕಾಲುಜಾರಿ ಬಿದ್ದಿರಬಹುದೇ ಎಂಬ ಶಂಕೆಯಿಂದ ಹುಡುಕಾಟ ಆರಂಭಿಸಲಾಯಿತು. ಕೂಡಲೇ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಎನ್.ಡಿ.ಆರ್.ಎಫ್. ತಂಡಕ್ಕೂ ಕರೆ ಹೋಯಿತು. ಸ್ಥಳೀಯರೂ ಸೇರಿ ರಾತ್ರಿಯಿಂದ ಭಾನುವಾರ ಸಂಜೆಯವರೆಗೂ ಹುಡುಕಾಟ ನಡೆಸಲಾಗಿತ್ತು. ಇದೀಗ ಸೋಮವಾರ ಅವರು ಶವವಾಗಿ ಪತ್ತೆಯಾಗಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

ಕರಂಬಾರು ಶಾಲೆಯಲ್ಲಿ ‘ಆಟಿಡೊಂಜಿ ದಿನ’; ಆಟಿ ಆಹಾರದ ಮಹತ್ವ ಸಾರಿದ ಲೋಕೇಶ್ ಪೂಜಾರಿ

error: Content is protected !!