ಬೆಂಗಳೂರಿನಲ್ಲಿ ‘ಸೇಫ್ ಫುಟ್ಪಾತ್’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ ಅತಿಕ್ರಮಣವನ್ನು ಬಿಬಿಎಂಪಿ ತೆರವುಗೊಳಿಸಿದೆ.
ಮತ್ತೆ ಅತಿಕ್ರಮಣವಾಗದಂತೆ ತಡೆಯಲು ಪಾಲಿಕೆ ಅಧಿಕಾರಿಗಳು ದಿಢೀರ್ ತಪಾಸಣೆ ಹಾಗೂ ಜಂಟಿ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಇನ್ನೊಂದೆಡೆ, ಪೀಣ್ಯ ಮೇಲ್ಸೇತುವೆಯಲ್ಲಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.



