ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿ ಶಾಸಕ ಹಾಗೂ ಸಚಿವರಿಗೂ AI ಕಾರ್ಯದರ್ಶಿಗಳನ್ನು ನೇಮಿಸುವ ಅಗತ್ಯ ಎದುರಾಗಲಿದೆ ಎಂದೂ ಅವರು ಅಭಿಪ್ರಾಯಪಟ್ಟರು.

ನಗರದ ಐಟಿಸಿ ವಿಂಡ್ಸರ್ ಹೋಟೆಲ್‌ನಲ್ಲಿ ರೀಜೆನೆಸಿಸ್ AI ಸಂಸ್ಥೆ ಆಯೋಜಿಸಿದ್ದ “AI for Viksit Bharat” CXO Summit ಉದ್ಘಾಟಿಸಿ ಮಾತನಾಡಿದ ಅವರು, AI ಇಂದು ಇಂಜಿನಿಯರ್‌ಗಳಿಗೆ ಮಾತ್ರ ಸೀಮಿತವಾಗಿಲ್ಲ. ಸಾಮಾನ್ಯ ಜನರು ಕೂಡ AI ಮೂಲಕ ಜಗತ್ತಿನ ವಿವಿಧ ಕ್ಷೇತ್ರಗಳ ಜ್ಞಾನವನ್ನು ಸುಲಭವಾಗಿ ಮತ್ತು ವೇಗವಾಗಿ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ತಾವು ವಿಧಾನಸಭೆಯ ಸ್ಪೀಕರ್ ಆಗಿದ್ದ ಸಂದರ್ಭದಲ್ಲಿ ಸದನದಲ್ಲಿ ಸಚಿವರು ಮತ್ತು ಶಾಸಕರ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಲು AI ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು ಎಂದು ಅವರು ನೆನಪಿಸಿಕೊಂಡರು. AI ಉದ್ಯೋಗಗಳನ್ನು ಕಸಿದುಕೊಳ್ಳುತ್ತದೆ ಎಂಬ ಆತಂಕವನ್ನು ಸಂಪೂರ್ಣವಾಗಿ ಒಪ್ಪಲು ಸಾಧ್ಯವಿಲ್ಲ. ಬದಲಾಗಿ, AI ಬಳಕೆಯಿಂದ ಕೆಲಸವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮತ್ತು ಗುಣಮಟ್ಟದಿಂದ ನಿರ್ವಹಿಸಬಹುದು ಎಂದು ಖಾದರ್ ಅಭಿಪ್ರಾಯಪಟ್ಟರು.

ಭಾರತದ ಬಹುದೊಡ್ಡ ಶಕ್ತಿ ಅದರ ಪ್ರಾದೇಶಿಕ ಭಾಷೆಗಳಾಗಿದ್ದು, AI ಮೂಲಕ ಅವುಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಬೇಕು ಎಂದು ಅವರು ಕರೆ ನೀಡಿದರು. ಅಲ್ಲದೆ, ಸಂವಿಧಾನದ ಮೌಲ್ಯಗಳನ್ನು AI ತಂತ್ರಜ್ಞಾನದ ಮೂಲಕ ಜನರಿಗೆ ತಲುಪಿಸುವ ಪ್ರಯತ್ನಗಳಿಗೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.

Leave a Reply

Your email address will not be published. Required fields are marked *

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

error: Content is protected !!