ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ.

ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ, ಅವರ ಪತ್ನಿ ಗಂಗಾ ಹಾಗೂ ಪುತ್ರ ಆದರ್ಶ್ ಗಾಯಗೊಂಡಿದ್ದಾರೆ. ಸ್ಫೋಟದ ಪರಿಣಾಮ ಶಿವರಾಮ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತು ಮೂಡಬಿದ್ರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



