ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದರ ಭಾಗವಾಗಿ ಬಂಟ್ವಾಳ ತಾಲೂಕು ಕಚೇರಿಗೂ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿ ವಿವಿಧ ವಿಭಾಗಗಳ ಕಡತಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಿತು.

ಕಚೇರಿಯಲ್ಲಿನ ಕಡತಗಳ ವಿಲೇವಾರಿ ಸ್ಥಿತಿ, ಬಾಕಿ ಇರುವ ಅರ್ಜಿಗಳು ಹಾಗೂ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳು ಮತ್ತು ಕಡತಗಳನ್ನು ಪರಿಶೀಲಿಸುವ ಉದ್ದೇಶದಿಂದ ಈ ಭೇಟಿ ನಡೆದಿದೆ ಎಂದು ತಿಳಿದುಬಂದಿದೆ.

ಮೇಲಾಧಿಕಾರಿಗಳ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಲ್ಲೂ ಏಕಕಾಲದಲ್ಲಿ ಪರಿಶೀಲನೆ ಕೈಗೊಳ್ಳಲಾಗಿದ್ದು, ಆಯಾ ಕಚೇರಿಗಳಲ್ಲಿರುವ ಸಂಬಂಧಿತ ಕಡತಗಳು ಹಾಗೂ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

error: Content is protected !!