ಪೂಜ್ಯಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಬಂಟ್ವಾಳ ತಾಲೂಕು ನಾವೂರು ಬಿ ಒಕ್ಕೂಟದ ವತಿಯಿಂದ ಕನಪಾದೆ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ದೈವಸ್ಥಾನದ ಪರಿಸರವನ್ನು ಸ್ವಚ್ಛ ಹಾಗೂ ಅಚ್ಚುಕಟ್ಟಾಗಿ ಇಡುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಒಕ್ಕೂಟದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ದೈವಸ್ಥಾನದ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದರು.
ದೈವಸ್ಥಾನದ ಪರಿಸರದಲ್ಲಿ ಸಂಗ್ರಹವಾಗಿದ್ದ ಕಸ, ಕಡ್ಡಿ ಹಾಗೂ ಇತರ ತ್ಯಾಜ್ಯಗಳನ್ನು ತೆರವುಗೊಳಿಸಿ ಸ್ವಚ್ಛತೆಗೆ ಆದ್ಯತೆ ನೀಡಲಾಯಿತು.

ಸಾರ್ವಜನಿಕ ಹಾಗೂ ಧಾರ್ಮಿಕ ಸ್ಥಳಗಳ ಸ್ವಚ್ಛತೆ ಕಾಪಾಡುವ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ನೀಡಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಸಂಘಗಳ ಸದಸ್ಯರು ಒಗ್ಗೂಡಿ ಸ್ವಯಂಪ್ರೇರಿತವಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು.
ಕಾರ್ಯಕ್ರಮದಲ್ಲಿ ಯೋಜನೆಯ ಮೇಲ್ವಿಚಾರಕ ನಾಗರಾಜ್, ಸೇವಾ ಪ್ರತಿನಿಧಿ ಸುನಿತಾ, ನಾವೂರು ಬಿ ಒಕ್ಕೂಟದ ಅಧ್ಯಕ್ಷ ಸದಾನಂದ ಹಳೆಗೇಟು ಸೇರಿದಂತೆ ವಿವಿಧ ಸಂಘಗಳ ಸದಸ್ಯರು ಉಪಸ್ಥಿತರಿದ್ದು, ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.



