ಜನ ಮನದ ನಾಡಿ ಮಿಡಿತ

Advertisement

ಕಲ್ಲಡ್ಕ ಭಟ್ ಹೆಸ್ರಲ್ಲಿ ನಕಲಿ ಫೇಸ್ ಬುಕ್ ಖಾತೆ: ದೂರು ದಾಖಲು

ಆರ್ ಎಸ್.ಎಸ್ ನ ಪ್ರಮುಖ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಪೇಸ್ ಬುಕ್ಖಾತೆ ತೆರೆದು ಆಕ್ಷೇಪಾರ್ಹ ಬರಹಗಳನ್ನು ಬರೆದು ಸಮಾಜದಲ್ಲಿ ಅಶಾಂತಿ ಹಬ್ಬಲು ಕೆಲವು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದು, ಇವರ ಪತ್ತೆ ಹಚ್ಚಿ ಕಾನೂನು ಕ್ರಮಕೈಗೊಳ್ಳುವಂತೆ ಮಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆರ್.ಎಸ್.ಎಸ್ ಪ್ರಮುಖರಾಗಿರುವ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಹಿಂದೂ ಸಾಮ್ರಾಟ್ ಎಂದೇ ಕರೆಯಲ್ಪಡುವ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಪೇಸ್ ಬುಕ್ ಖಾತೆಯನ್ನು ತೆರೆದು ಆಕ್ಷೇಪ ಆರ್ಹ ಸುದ್ದಿಗಳನ್ನು ಬಿತ್ತರಿಸುತ್ತಿರುವ ಬಗ್ಗೆ ದೂರು ದಾಖಲಾಗಿದೆ.


ಕಲ್ಲಡ್ಕ ಭಟ್ ಅವರ ಪೇಸ್ ಬುಕ್ ಖಾತೆಯಾಗಲಿ,
ಅಥವಾ ಇನ್ನಿತರ ಯಾವುದೇ ಸಾಮಾಜಿಕ
ಜಾಲತಾಣದಲ್ಲಿ ಖಾತೆಯನ್ನು ಹೊಂದಿರುವುದಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಅಲ್ಲದೆ ಈ ಖಾತೆಯ ಮೂಲಕ ಸಮಾಜದಲ್ಲಿ ಅಶಾಂತಿ
ಹಬ್ಬಿಸುವ ಪ್ರಯತ್ನ ಮತ್ತು ಹೆಸರನ್ನು ಕೆಡಿಸುವ ಕೆಲಸ
ಮಾಡಲಾಗುತ್ತಿದ್ದು ಈ ಬಗ್ಗೆ ಪೊಲೀಸರು ಸೂಕ್ತವಾದ
ತನಿಖೆ ನಡೆಸುವಂತೆ ಮತ್ತು ಅವರ ಮೇಲೆ ಕಾನೂನು
ಕ್ರಮವನ್ನು ಕೈಗೊಂಡು ಮುಂದಿನ ದಿನಗಳಲ್ಲಿ ಇಂತಹ
ಘಟನೆಗಳು ಪುನರಾವರ್ತನೆಯಾಗದಂತೆ ಪೊಲೀಸರು ನಿಗಾ ವಹಿಸಲು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!