ಜನ ಮನದ ನಾಡಿ ಮಿಡಿತ

Advertisement

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಯಕ್ಷ ಕ್ರಾಂತಿಯ ಯೋಜನೆ “ಯಕ್ಷ ಧ್ರುವ” ಯಕ್ಷ ಶಿಕ್ಷಣದ ಶುಭಾರಂಭ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು

ಯಕ್ಷ ಕ್ರಾಂತಿಯ ಯೋಜನೆ ಯಕ್ಷ ಧ್ರುವ ಯಕ್ಷ ಶಿಕ್ಷಣ ದ ಶುಭಾರಂಭ.

ಪಟ್ಲ ಫೌಂಡೇಶನ್ ಯಕ್ಷಗಾನವನ್ನು ಉಳಿಸಿ ಬೆಳೆಸುವತ್ತ ಮಹತ್ತರ ಹೆಜ್ಜೆಗಳನ್ನು ಈಗಾಗಲೇ ಹಮ್ಮಿಕೊಂಡು ಅವುಗಳನ್ನು ಕಾರ್ಯಗತಗೊಳಿಸಿರುತ್ತದೆ.

ಪ್ರಸ್ತುತ ಆಧುನಿಕ ವೈಜ್ಞಾನಿಕ ಕಂಪ್ಯೂಟರೀಕರಣದ ಈ ಕಾಲಘಟ್ಟದಲ್ಲಿ ಸಂಪ್ರದಾಯಕವಾದ ಯಕ್ಷಗಾನವನ್ನು ಮುಂದಿನ ಪೀಳಿಗೆಗೆ ಕಲಿಸಿ ಬೆಳೆಸುವ ಸದುದ್ದೇಶದಿಂದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ಎಂಬ ಪ್ರಯೋಗಕ್ಕೆ ಚಾಲನೆ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಸಿದ್ಧವಾಗಿದೆ.

ಆ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢ ಶಾಲೆಗಳಲ್ಲಿ ಉಚಿತವಾಗಿ ಫೌಂಡೇಶನಿನ ಮೂಲಕ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ನೀಡುವುದಾಗಿ ತೀರ್ಮಾನಿಸಿ ಸಂಬಂಧಪಟ್ಟ ಇಲಾಖೆಗಳ ಅನುಮತಿಯನ್ನು ಪಡೆಯಲಾಗಿದೆ.

ಇಲಾಖಾ ಅಧಿಕಾರಿಗಳ ಉತ್ತಮ ಸ್ಪಂದನೆ ದೊರತ ಹಿನ್ನಲೆಯಲ್ಲಿ ಆಗಸ್ಟ್ 3 ನೇ ತಾರೀಖು ಗುರುವಾರ ಬೆಳಿಗ್ಗೆ 10-30 ಕ್ಕೆ ಸರಿಯಾಗಿ ಸರಳರೂಪದ ಉದ್ಘಾಟನಾ ಸಮಾರಂಭವು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ, ಕಿನ್ನಿಗೋಳಿ ಇಲ್ಲಿ ನೆರವೇರಲಿದೆ.

ಪಟ್ಲ ಫೌಂಡೇಶನ್ ವತಿಯಿಂದ ಈಗಾಗಲೇ ಈ ಸದುದ್ದೇಶದ ಯೋಜನೆಗೆ 30 ಪ್ರಸಿದ್ಧ ಯುವ ಯಕ್ಷ ಗುರುಗಳನ್ನು ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!