ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು
ಯಕ್ಷ ಕ್ರಾಂತಿಯ ಯೋಜನೆ ಯಕ್ಷ ಧ್ರುವ ಯಕ್ಷ ಶಿಕ್ಷಣ ದ ಶುಭಾರಂಭ.

ಪಟ್ಲ ಫೌಂಡೇಶನ್ ಯಕ್ಷಗಾನವನ್ನು ಉಳಿಸಿ ಬೆಳೆಸುವತ್ತ ಮಹತ್ತರ ಹೆಜ್ಜೆಗಳನ್ನು ಈಗಾಗಲೇ ಹಮ್ಮಿಕೊಂಡು ಅವುಗಳನ್ನು ಕಾರ್ಯಗತಗೊಳಿಸಿರುತ್ತದೆ.
ಪ್ರಸ್ತುತ ಆಧುನಿಕ ವೈಜ್ಞಾನಿಕ ಕಂಪ್ಯೂಟರೀಕರಣದ ಈ ಕಾಲಘಟ್ಟದಲ್ಲಿ ಸಂಪ್ರದಾಯಕವಾದ ಯಕ್ಷಗಾನವನ್ನು ಮುಂದಿನ ಪೀಳಿಗೆಗೆ ಕಲಿಸಿ ಬೆಳೆಸುವ ಸದುದ್ದೇಶದಿಂದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ಎಂಬ ಪ್ರಯೋಗಕ್ಕೆ ಚಾಲನೆ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಸಿದ್ಧವಾಗಿದೆ.

ಆ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢ ಶಾಲೆಗಳಲ್ಲಿ ಉಚಿತವಾಗಿ ಫೌಂಡೇಶನಿನ ಮೂಲಕ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ನೀಡುವುದಾಗಿ ತೀರ್ಮಾನಿಸಿ ಸಂಬಂಧಪಟ್ಟ ಇಲಾಖೆಗಳ ಅನುಮತಿಯನ್ನು ಪಡೆಯಲಾಗಿದೆ.
ಇಲಾಖಾ ಅಧಿಕಾರಿಗಳ ಉತ್ತಮ ಸ್ಪಂದನೆ ದೊರತ ಹಿನ್ನಲೆಯಲ್ಲಿ ಆಗಸ್ಟ್ 3 ನೇ ತಾರೀಖು ಗುರುವಾರ ಬೆಳಿಗ್ಗೆ 10-30 ಕ್ಕೆ ಸರಿಯಾಗಿ ಸರಳರೂಪದ ಉದ್ಘಾಟನಾ ಸಮಾರಂಭವು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ, ಕಿನ್ನಿಗೋಳಿ ಇಲ್ಲಿ ನೆರವೇರಲಿದೆ.
ಪಟ್ಲ ಫೌಂಡೇಶನ್ ವತಿಯಿಂದ ಈಗಾಗಲೇ ಈ ಸದುದ್ದೇಶದ ಯೋಜನೆಗೆ 30 ಪ್ರಸಿದ್ಧ ಯುವ ಯಕ್ಷ ಗುರುಗಳನ್ನು ನೇಮಕ ಮಾಡಲಾಗಿದೆ.



