ಜನ ಮನದ ನಾಡಿ ಮಿಡಿತ

Advertisement

ಏಳು ಲಕ್ಷ ರೂಪಾಯಿ ಮೌಲ್ಯದ 250 ಗ್ರಾಂ ಚರಸ್ ಹಾಗೂ ಕಾರು ಜಪ್ತಿ; ಓರ್ವ ಬಂಧನ

ಮಂಗಳೂರು: ಏಳು ಲಕ್ಷ ರೂಪಾಯಿ ಮೌಲ್ಯದ 250 ಗ್ರಾಂ ಚರಸ್ ಹಾಗೂ ಕಾರನ್ನು ಜಪ್ತಿ ಮಾಡಿ ಓರ್ವನನ್ನು ಬಜ್ಪೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಅಬ್ದುಲ್‌ ಅಝೀಜ್‌ (34) ಬಂಧಿತ ಆರೋಪಿಯಾಗಿದ್ದು, ಅತನಿಂದ ಸುಮಾರು 7 ಲಕ್ಷ ರೂ. ಮೌಲ್ಯದ ಚರಸ್‌ ಮತ್ತು ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಮಂಗಳೂರು ನಗರದಾದ್ಯಂತ ಮಾದಕ ವ್ಯಸನ ಮುಕ್ತ ಮಂಗಳೂರು ಮಾಡುವ ನಿಟ್ಟಿನಲ್ಲಿ ಮೇಲಾಧಿ ಕಾರಿಗಳು ನೀಡಿದ ಸೂಚನೆಯಂತೆ ಬಜಪೆ ಠಾಣಾ ಪೊಲೀಸರು ಮುರ ನಗರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಂಬರ್‌ ಫ್ಲೆಟ್‌ ಇಲ್ಲದ ಸ್ವಿಫ್ಟ್‌ ಕಾರನ್ನು ನಿಲ್ಲಿಸಲು ಸೂಚನೆ ನೀಡಿದಾಗ ಕಾರು ಚಾಲಕ ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ. ತಕ್ಷಣ ಪೊಲೀಸರು ಕಾರಿನ ಬಳಿ ತೆರಳಿ ಸೂರಿಂಜೆ ಕಿನ್ನಿಗುಡ್ಡೆ ಹೌಸ್‌ ನಿವಾಸಿ ಅಬ್ದುಲ್‌ ಅಝೀಜ್‌ನನ್ನು ವಶಕ್ಕೆ ಪಡೆದು ಕಾರು ಪರಿಶೀಲನೆ ಮಾಡಿದಾಗ 250 ಗ್ರಾಂ ತೂಕದ ಮಾದಕ ವಸ್ತು ಚರಸ್‌ ಪತ್ತೆಯಾಗಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಇನ್ನು ಪರಾರಿಯಾದ ಆರೊಪಿಯ ಪತ್ತೆಗಾಗಿ ಪೊಲೀಸರು ತೀವ್ರ ಕಾರ್ಯಚರಣೆ ನಡೆಸುತ್ತಿದ್ದಾರೆ. ಬಜಪೆ ಠಾಣಾ ಪಿ.ಐ. ಪ್ರಕಾಶ್‌ ನೇತೃತ್ವದ ತಂಡ ಕಾರ್ಯಚರಣೆಯಲ್ಲಿ ಪಾಲ್ಗೊಂಡಿತ್ತು.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!