ಜನ ಮನದ ನಾಡಿ ಮಿಡಿತ

Advertisement

ಏಳು ಲಕ್ಷ ರೂಪಾಯಿ ಮೌಲ್ಯದ 250 ಗ್ರಾಂ ಚರಸ್ ಹಾಗೂ ಕಾರು ಜಪ್ತಿ; ಓರ್ವ ಬಂಧನ

ಮಂಗಳೂರು: ಏಳು ಲಕ್ಷ ರೂಪಾಯಿ ಮೌಲ್ಯದ 250 ಗ್ರಾಂ ಚರಸ್ ಹಾಗೂ ಕಾರನ್ನು ಜಪ್ತಿ ಮಾಡಿ ಓರ್ವನನ್ನು ಬಜ್ಪೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಅಬ್ದುಲ್‌ ಅಝೀಜ್‌ (34) ಬಂಧಿತ ಆರೋಪಿಯಾಗಿದ್ದು, ಅತನಿಂದ ಸುಮಾರು 7 ಲಕ್ಷ ರೂ. ಮೌಲ್ಯದ ಚರಸ್‌ ಮತ್ತು ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಮಂಗಳೂರು ನಗರದಾದ್ಯಂತ ಮಾದಕ ವ್ಯಸನ ಮುಕ್ತ ಮಂಗಳೂರು ಮಾಡುವ ನಿಟ್ಟಿನಲ್ಲಿ ಮೇಲಾಧಿ ಕಾರಿಗಳು ನೀಡಿದ ಸೂಚನೆಯಂತೆ ಬಜಪೆ ಠಾಣಾ ಪೊಲೀಸರು ಮುರ ನಗರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಂಬರ್‌ ಫ್ಲೆಟ್‌ ಇಲ್ಲದ ಸ್ವಿಫ್ಟ್‌ ಕಾರನ್ನು ನಿಲ್ಲಿಸಲು ಸೂಚನೆ ನೀಡಿದಾಗ ಕಾರು ಚಾಲಕ ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ. ತಕ್ಷಣ ಪೊಲೀಸರು ಕಾರಿನ ಬಳಿ ತೆರಳಿ ಸೂರಿಂಜೆ ಕಿನ್ನಿಗುಡ್ಡೆ ಹೌಸ್‌ ನಿವಾಸಿ ಅಬ್ದುಲ್‌ ಅಝೀಜ್‌ನನ್ನು ವಶಕ್ಕೆ ಪಡೆದು ಕಾರು ಪರಿಶೀಲನೆ ಮಾಡಿದಾಗ 250 ಗ್ರಾಂ ತೂಕದ ಮಾದಕ ವಸ್ತು ಚರಸ್‌ ಪತ್ತೆಯಾಗಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಇನ್ನು ಪರಾರಿಯಾದ ಆರೊಪಿಯ ಪತ್ತೆಗಾಗಿ ಪೊಲೀಸರು ತೀವ್ರ ಕಾರ್ಯಚರಣೆ ನಡೆಸುತ್ತಿದ್ದಾರೆ. ಬಜಪೆ ಠಾಣಾ ಪಿ.ಐ. ಪ್ರಕಾಶ್‌ ನೇತೃತ್ವದ ತಂಡ ಕಾರ್ಯಚರಣೆಯಲ್ಲಿ ಪಾಲ್ಗೊಂಡಿತ್ತು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!