ಜನ ಮನದ ನಾಡಿ ಮಿಡಿತ

Advertisement

ಅಪಘಾತ ಹಿನ್ನಲೆ ಪ್ರಶಾಂತ್ ಮಿದುಳು ನಿಷ್ಕ್ರಿಯ; ಅಂಗಾಂಗ ದಾನ

ಕಾಪು: ಅಪಘಾತದಿಂದಾಗಿ ಮಿದುಳು ನಿಷ್ಕ್ರಿಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಉದ್ಯಾವರ ಬೋಳಾರ ಗುಡ್ಡೆ ಅಂಕುದ್ರು ನಿವಾಸಿ ಪ್ರಶಾಂತ್ ಅವರ ಅಂಗಾಂಗಳನ್ನು ದಾನ ಮಾಡುವ ಮೂಲಕ ಅವರ ಮನೆಯವರು ಮಾನವೀಯತೆ ಮೆರೆದಿದ್ದಾರೆ.


ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕನ್ನಿ ಪಾರ್ಟಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ್ ಬುಧವಾರ ಮಧ್ಯಾಹ್ನ ಕೆಲಸ ಮುಗಿಸಿ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಹಲೀಮಾ ಸಾಬು ಸಭಾಭವನದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಗೆ ಎಸೆಯಲ್ಪಟ್ಟಿದ್ದರು.
ತಲೆಗೆ ತೀವ್ರ ಗಾಯಗೊಂಡಿದ್ದ ಅವರನ್ನು ಸ್ನೇಹಿತರಾದ ಪ್ರವೀಣ್ ಮತ್ತು ಅಭಿಷೇಕ್ ಅವರು ಸ್ಥಳೀಯರ ಸಹಾಯದಿಂದ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಅಲ್ಲಿನ ವೈದ್ಯರ ಸೂಚನೆ ಮೆರೆಗೆ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಪ್ರಶಾಂತ್‌ರವರ ತಲೆಗೆ ಗಂಭೀರವಾದ ಗಾಯವಾಗಿದ್ದು, ಅವರ ಮೆದುಳು ನಿಷ್ಟ್ರಿಯಗೊಂಡಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಪ್ರಶಾಂತ್ ಕೊನೆಯುಸಿರೆಳೆದರು .
ಇನ್ನೂ ಆಸ್ಪತ್ರೆಯ ವೈದ್ಯರು ಮೃತರ ಸಂಬ0ಧಿಕರಿಗೆ ಅಂಗಾಂಗ ದಾನದ ಬಗ್ಗೆ ಮಾಹಿತಿ ನೀಡಿದ್ದರು. ಮೃತರ ಸಹೋದರಿ ಪ್ರಮೀಳಾ ಅವರು ಸಹೋದರನ ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡುವ ಮೂಲಕ ಇತರ ರೋಗಿಗಳ ಜೀವ ಉಳಿಸುವಲ್ಲಿ ಮಹತ್ತರವಾದ ಪಾತ್ರವಹಿಸಿದ್ದಾರೆ.

ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ ಬಿ. ಜಗನ್ನಾಥ ಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕಾಪು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ. ಮೃತ ಯುವಕನ ಕಿಡ್ನಿ ಮತ್ತು ಲಿವರ್ ಅನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯರ ಮೂಲಕ ಸುರಕ್ಷಿತವಾಗಿ ತೆಗೆದು ಮಂಗಳೂರು ಮತ್ತು ಬೆಂಗಳೂರಿಗೆ ಸಾಗಿಸಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!