ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿದ್ದ ಮಾಜಿ ಸಂಸದ ಸಜ್ಜನ ರಾಜಕಾರಣಿ ದಿ. ದ್ರುವನಾರಾಯಣ್ ಅವರ 62 ನೇ ಹುಟ್ಟುಹಬ್ಬ ಪುತ್ತೂರಿನ ಅಭಿಮಾನಿಗಳಿಂದ ಅಗಸ್ಟ್ 5 ಶನಿವಾರ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆಯಲಿದೆ. ಬೆಳಗ್ಗೆ ಪ್ರಜ್ಞಾ ಸಲಹಾ ಕೇಂದ್ರದಲ್ಲಿ ಬಟ್ಟೆ ವಿತರಣೆ. ಬಳಿಕ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ರಕ್ತದಾನ ಶಿಬಿರ ಮತ್ತು ಸಭಾ ಕಾರ್ಯಕ್ರನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಅತೀ ಕಿರಿಯ ಶಾಸಕರಾಗಿರುವ ದರ್ಶನ್ ದ್ರುವನಾರಾಯಣ್ ರವರು ಪುತ್ತೂರಿಗೆ ಬರುತ್ತಿದ್ದಾರೆ. ಕ್ಷೇತ್ರದ ಶಾಸಕರು ಆಶೋಕ್ ಕುಮಾರ್ ರೈ ಕೋಡಿಂಬಾಡಿ, ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ, ಕಾವು ಹೇಮನಾಥ್ ಶೆಟ್ಟಿ ಮೊದಲಾದ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.



