ಜನ ಮನದ ನಾಡಿ ಮಿಡಿತ

Advertisement

ಆಟೋ ಚಾಲಕನಿಗೆ ಹಲ್ಲೆ ಪ್ರಕರಣ ಮೂವರ ಬಂಧನ

ಕಳೆದ ವಾರ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತ ತಂಡ ಹಲ್ಲೆ ಮಾಡಿದ್ದು ಇದೀಗ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಧರ್ಮಸ್ಥಳ ನಿವಾಸಿ ಅವಿನಾಶ್ (26) ಧರ್ಮಸ್ಥಳ ನಿವಾಸಿ ನಂದಿತ್ (20) ಪುತ್ತೂರು ತಾಲೂಕಿನ ಉಪ್ಪಿನಂಗಡಿ ನಿವಾಸಿ ಅಕ್ಷತ್ (22) ಬಂಧಿತ ಆರೋಪಿಗಳು. ಮೂವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳಿದ ಆರೋಪಿಗಳಿಗೆ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿ ಒಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜ್ ಕೊನೆಗೊಂಡಿದ್ದರಿಂದ ಬುಧವಾರ ರಾತ್ರಿ ಬೆಂಗಳೂರಿಗೆ ಲಗೇಜ್ ಜೊತೆ ತೆರಳಲು ಉಜಿರೆದ್ವಾರದ ಎದುರು ನಿಂತು ಪರಿಚಯಸ್ತ ಮುಸ್ಲಿಂ ಆಟೋ ಚಾಲಕನಿಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆಗಸ್ಟ್ ಎರಡರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಅಪರಿಚಿತ ಯುವಕರ ತಂಡವೊಂದು “ನಿನಗೆ ಹಿಂದು ಯುವತಿಯರೇ ಬೇಕ” ಎಂದು ಬೆದರಿಕೆ ಹಾಕಿ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್ ಅವರ ಏಳನೇ ಪುತ್ರ ಆಟೋ ಚಾಲಕ ಮೊಹಮ್ಮದ್ ಆಶೀಕ್ (22) ಮೇಲೆ ಹಲ್ಲೆ ನಡೆಸಿದ್ದರು. ಯುವಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಾಲಂ 143, 147, 341, 323, 504, 506, R/W 149 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!