ಜನ ಮನದ ನಾಡಿ ಮಿಡಿತ

Advertisement

ಬಂಟರ ಸಂಘ ಸಾಲೆತ್ತೂರು ವಲಯದಿಂದ “ಆಟಿಡೊಂಜಿ ಬಂಟೆರ್ನ ಸ್ನೇಹಕೂಟ”

ಬಂಟರ ಸಂಘ ಸಾಲೆತ್ತೂರು ವಲಯದಿಂದ ಆಯೋಜಿಸಲಾದ “ಆಟಿಡೊಂಜಿ ಬಂಟೆರ್ನ ಸ್ನೇಹಕೂಟ” ವಿಜಯ್ ಶ್ರೀ ಕಲ್ಯಾಣ ಮಂಟಪ ಕುಡ್ತಮುಗೀರುವಿನಲ್ಲಿ ವಿಜ್ರಂಭಣೆಯಿಂದ ನಡೆಯಿತು.

ಬೆಳಗ್ಗೆ ಗಂಟೆ ಒಂಬತ್ತುಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟರ ಸಂಘ ಬಂಟ್ವಾಳದ ಕಾರ್ಯದರ್ಶಿ ಶ್ರೀ ಜಗನ್ನಾಥ ಚೌಟ ಮಾಣಿ ವಹಿಸಿಕೊಂಡರು.

ಶ್ರೀ ದೇವಣ್ಣ ಆಳ್ವ ಎರ್ಮೆನಿಲೆ ಪ್ರಗತಿಪರ ಕೃಷಿಕರು, ಶ್ರೀ ಜತ್ತಪ್ಪ ಪೂಂಜ ಕೊಡಂಗೆ ಪ್ರಗತಿಪರ ಕೃಷಿಕರು, ಶ್ರೀ ಕೆ. ಎಂ. ಶಿವರಾಮ ಶೆಟ್ಟಿ, ನಿವೃತ್ತ ಸೀನಿಯರ್ ಮ್ಯಾನೇಜರ್ ವಿಜಯ ಬ್ಯಾಂಕ್ ಗೌರವ ಉಪಸ್ಥಿತರಿದ್ದರು. ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಸಮಾಜದ ಬಂಟ ಬಂಧುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ವಿವಿಧ ಸ್ಪರ್ಧೆಗಳು ರಸಮಂಜರಿ ಮನೋರಂಜನಾ ಕಾರ್ಯಕ್ರಮ ಮುಂತಾದವುಗಳು ಜರುಗಿದವು.

ಮಧ್ಯಾಹ್ನ 12ರ ನಂತರ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀದೇವಪ್ಪ ಶೇಖರ ಅಧ್ಯಕ್ಷರು ಬಂಟರ ಸಂಘ ಸಾಲೆತ್ತೂರು ವಹಿಸಿಕೊಂಡರು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದಂತಹ ಶ್ರೀ ಲೋಕೇಶ್ ಶೆಟ್ಟಿ- ಕೋಶಾಧಿಕಾರಿ ಬಂಟರ ಸಂಘ ಬಂಟ್ವಾಳ, ಶ್ರೀಮತಿ ರಮಾ ಎಸ್ ಭಂಡಾರಿ – ಅಧ್ಯಕ್ಷರು ಮಹಿಳಾ ಬಂಟರ ಸಂಘ ಬಂಟ್ವಾಳ, ಶ್ರೀ ಭುಜಂಗ ರೈ ಪಡಾರಗುತ್ತು – ಆಡಳಿತ ಮೊಕ್ತೇಸರರು ಶ್ರೀ ಮಲರಾಯಿ ಮೂವರ್ ದೈವಗಳು ಕಾಪು ಮಜಲು, ಶ್ರೀ ಲಕ್ಷ್ಮೀನಾರಾಯಣ ಅಡ್ಯಂತಾಯ – ಮಾಜಿ ಅಧ್ಯಕ್ಷರು ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘ ಕೊಡಂಗಾಯಿ, ಶ್ರೀ ಗಿರೀಶ್ ಭಂಡಾರಿ ಕುಳಾಲು – ಕೋಶಾಧಿಕಾರಿ ಶ್ರೀ ಧೂಮಾವತಿ ಬಂಟ ದೈವಗಳ ಸೇವಾ ಟ್ರಸ್ಟ್ (ರಿ) ಸಭೆಯನ್ನುದ್ದೇಶಿಸಿ ಮಾತನಾಡಿದರು.

ತದನಂತರ S.S.L.C ಮತ್ತು P.U.C ಯಲ್ಲಿ ಶೇಕಡಾ 90% ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶ್ರೀ ಭಾಗ್ಯರಾಜ್ ಶೆಟ್ಟಿ ಹರೇಕಳ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!