ಜನ ಮನದ ನಾಡಿ ಮಿಡಿತ

Advertisement

ಬಂಟರ ಸಂಘ ಸಾಲೆತ್ತೂರು ವಲಯದಿಂದ “ಆಟಿಡೊಂಜಿ ಬಂಟೆರ್ನ ಸ್ನೇಹಕೂಟ”

ಬಂಟರ ಸಂಘ ಸಾಲೆತ್ತೂರು ವಲಯದಿಂದ ಆಯೋಜಿಸಲಾದ “ಆಟಿಡೊಂಜಿ ಬಂಟೆರ್ನ ಸ್ನೇಹಕೂಟ” ವಿಜಯ್ ಶ್ರೀ ಕಲ್ಯಾಣ ಮಂಟಪ ಕುಡ್ತಮುಗೀರುವಿನಲ್ಲಿ ವಿಜ್ರಂಭಣೆಯಿಂದ ನಡೆಯಿತು.

ಬೆಳಗ್ಗೆ ಗಂಟೆ ಒಂಬತ್ತುಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟರ ಸಂಘ ಬಂಟ್ವಾಳದ ಕಾರ್ಯದರ್ಶಿ ಶ್ರೀ ಜಗನ್ನಾಥ ಚೌಟ ಮಾಣಿ ವಹಿಸಿಕೊಂಡರು.

ಶ್ರೀ ದೇವಣ್ಣ ಆಳ್ವ ಎರ್ಮೆನಿಲೆ ಪ್ರಗತಿಪರ ಕೃಷಿಕರು, ಶ್ರೀ ಜತ್ತಪ್ಪ ಪೂಂಜ ಕೊಡಂಗೆ ಪ್ರಗತಿಪರ ಕೃಷಿಕರು, ಶ್ರೀ ಕೆ. ಎಂ. ಶಿವರಾಮ ಶೆಟ್ಟಿ, ನಿವೃತ್ತ ಸೀನಿಯರ್ ಮ್ಯಾನೇಜರ್ ವಿಜಯ ಬ್ಯಾಂಕ್ ಗೌರವ ಉಪಸ್ಥಿತರಿದ್ದರು. ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಸಮಾಜದ ಬಂಟ ಬಂಧುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ವಿವಿಧ ಸ್ಪರ್ಧೆಗಳು ರಸಮಂಜರಿ ಮನೋರಂಜನಾ ಕಾರ್ಯಕ್ರಮ ಮುಂತಾದವುಗಳು ಜರುಗಿದವು.

ಮಧ್ಯಾಹ್ನ 12ರ ನಂತರ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀದೇವಪ್ಪ ಶೇಖರ ಅಧ್ಯಕ್ಷರು ಬಂಟರ ಸಂಘ ಸಾಲೆತ್ತೂರು ವಹಿಸಿಕೊಂಡರು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದಂತಹ ಶ್ರೀ ಲೋಕೇಶ್ ಶೆಟ್ಟಿ- ಕೋಶಾಧಿಕಾರಿ ಬಂಟರ ಸಂಘ ಬಂಟ್ವಾಳ, ಶ್ರೀಮತಿ ರಮಾ ಎಸ್ ಭಂಡಾರಿ – ಅಧ್ಯಕ್ಷರು ಮಹಿಳಾ ಬಂಟರ ಸಂಘ ಬಂಟ್ವಾಳ, ಶ್ರೀ ಭುಜಂಗ ರೈ ಪಡಾರಗುತ್ತು – ಆಡಳಿತ ಮೊಕ್ತೇಸರರು ಶ್ರೀ ಮಲರಾಯಿ ಮೂವರ್ ದೈವಗಳು ಕಾಪು ಮಜಲು, ಶ್ರೀ ಲಕ್ಷ್ಮೀನಾರಾಯಣ ಅಡ್ಯಂತಾಯ – ಮಾಜಿ ಅಧ್ಯಕ್ಷರು ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘ ಕೊಡಂಗಾಯಿ, ಶ್ರೀ ಗಿರೀಶ್ ಭಂಡಾರಿ ಕುಳಾಲು – ಕೋಶಾಧಿಕಾರಿ ಶ್ರೀ ಧೂಮಾವತಿ ಬಂಟ ದೈವಗಳ ಸೇವಾ ಟ್ರಸ್ಟ್ (ರಿ) ಸಭೆಯನ್ನುದ್ದೇಶಿಸಿ ಮಾತನಾಡಿದರು.

ತದನಂತರ S.S.L.C ಮತ್ತು P.U.C ಯಲ್ಲಿ ಶೇಕಡಾ 90% ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶ್ರೀ ಭಾಗ್ಯರಾಜ್ ಶೆಟ್ಟಿ ಹರೇಕಳ ನಿರೂಪಿಸಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!