ಜನ ಮನದ ನಾಡಿ ಮಿಡಿತ

Advertisement

ರಸ್ತೆ ಮಧ್ಯೆ ಗಜರಾಜನ ದರ್ಬಾರ್..! ಹೈರಾಣಾದ ವಾಹನ ಸವಾರರು..

ಇತ್ತೀಚೆಗೆ ಕಾಡನ್ನ ತೊರೆದು ನಾಡಿಗೆ ಬರ್ತಿರೋ ಪ್ರಾಣಿಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗ್ತಾನೆ ಇದೆ. ಅದರಲ್ಲೂ ನಾಡಿಗೆ ಬರುವ ಪ್ರಾಣಿಗಳು ಕಾಡಿನಲ್ಲಿ ದರ್ಬಾರ್ ಮಾಡೋ ರೀತಿಯೇ ನಾಡಲ್ಲೂ ದರ್ಬಾರ್ ಮಾಡುತ್ತಿವೆ.


ಹೌದು, ಇಲ್ಲಿ ಒಂದು ಕಾಡಾನೆ ಅದೇ ರೀತಿ ಮಾಡಿದೆ. ತನ್ನದಲ್ಲದ ಏರಿಯಾದಲ್ಲಿ ತಾನೇ ಕಿಂಗ್ ಅಂದುಕೊAಡು ವಾಹನ ಸವಾರರಿಗೆ ಕಾಟ ಕೊಟ್ಟಿದೆ.
ಅಷ್ಟಕ್ಕೂ ಈ ಕಾಡಾನೆ ಏನು ಮಾಡಿದೆ ಅಂತ ಕೇಳ್ತೀರಾ ಹಾಗಿದ್ದರೆ ಹೇಳ್ತಿವಿ ಓದಿ, ಈ ಗಜರಾಜ ರಸ್ತೆಯಲ್ಲಿ ಬಂದು ನಿಂತು ನಾನೇ ಈ ರಸ್ತೆಗೆ ಕಿಂಗ್ ಅಂತಾ ಬರೋ ಗಾಡಿಗಳನ್ನ ಅಡ್ಡಗಟ್ಟಿ ನಿಂತ್ಬಿಟ್ಟಿದೆ. ಯಾರನ್ನೂ ಮುಂದೆ ಹೋಗೋಕೆ ಬಿಡ್ತಿಲ್ಲ. ನನ್ನನ್ನ ದಾಟಿ ಅದ್ಹೆಂಗೆ ಮುಂದೆ ಹೋಗ್ತೀರಾ ನೋಡ್ತೀನಿ ಅಂತಾ ಸವಾಲ್ ಹಾಕಿ ನಿಂತಿದೆ.

ಕೇರಳದ ಶೋಲಯಾರ್ ಬಳಿ ಒಂಟಿಸಲಗ ರಸ್ತೆಲೀ ದರ್ಬಾರ್ ಮಾಡ್ತಿದಿದೆ. ಒಂಟಿಸಲಗ ಕೆಎಸ್‌ಆರ್‌ಟಿಸಿ ಬಸ್ ಸೇರಿದಂತೆ ಅನೇಕ ಬಸ್‌ಗಳನ್ನ ತಡೆದಿದೆ. ಇನ್ನೂ ಅಚ್ಚರಿ ಎಂಬ0ತೆ ಆನೆಯೊಂದಿಗೆ ಚಾಲಕ ಮಾತನಾಡಿದ್ದು, ದಾರಿ ಬಿಟ್ಟುಕೊಡುವಂತೆ ಮನವಿ ಮಾಡಿದ್ದಾನೆ. ಆಗಲೂ ಆನೆ ಜಗ್ಗದೇ ಇದ್ದಾಗ ಒಂದಷ್ಟು ಬಾರಿ ಆನೆಯನ್ನ ಗದರಿಸಿದ್ದಾನೆ. ಆದ್ರೂ ಕೂಡ ಆನೆ ಮಾತ್ರ ದಾರಿ ಬಿಟ್ಟುಕೊಟ್ಟಿಲ್ಲ. ಸ್ವಲ್ಪ ಸಮಯ ಕಳೆದ ಮೇಲೆ, ಇದಕ್ಕೂ ತನಗೂ ಸಂಬ0ಧವೇ ಇಲ್ಲ ಅನ್ನೋ ಹಾಗೆ, ಅಲ್ಲೇನೂ ನಡೆದೇ ಇಲ್ಲವೇನೋ ಅನ್ನೋ ಹಾಗೆ, ಆನೆ ತನ್ನ ಪಾಡಿಗೆ ತಾನು ಹೊರಟೋಗಿದೆ. ಅದೃಷ್ಟವಶಾತ್ ಆನೆ ಯಾರ ಮೇಲೂ ದಾಳಿ ನಡೆಸಿಲ್ಲ.


ಇನ್ನೂ ಈ ಗಜರಾಜ ರಸ್ತೆ ಮಧ್ಯೆ ದರ್ಬಾರ್ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!