ಜನ ಮನದ ನಾಡಿ ಮಿಡಿತ

Advertisement

ಕೆದಿಲ ಗ್ರಾಮ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ

ಮೂವರು ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್ ಸೇರ್ಪಡೆಗೊಂಡು ಕಾಂಗ್ರೆಸ್ ತನ್ನ ಬಲವನ್ನು 9 ಕ್ಕೆ ಹೆಚ್ಚಿಸಿಕೊಂಡು ಆಡಳಿತದ ಚುಕ್ಕಾಣಿ ಹಿಡಿಯಿತು.

ಕಳೆದ ಬಾರಿ ಕಾಂಗ್ರೆಸ್ 7 ಬಿಜೆಪಿ 7 ಸಮಬಲ ಸ್ಥಾನ ಪಡೆದು ಸಾಮಾನ್ಯ ಮಹಿಳೆಗೆ ಅಧ್ಯಕ್ಷ ಸ್ಥಾನದ ಅವಕಾಶವನ್ನು ತನ್ನದಾಗಿಸಿಕೊಳ್ಳಲು ಬಿಜೆಪಿ ಆಪರೇಶನ್ ಕಮಲದ ಮೂಲಕ ತನ್ನ ಬಲವನ್ನು 8 ಕ್ಕೆ ಹೆಚ್ಚಿಸಿಕೊಂಡಿತ್ತು.
ಆದರೆ ರಾತ್ರೊ ರಾತ್ರಿ ನಡೆದ ಕಾವು ಹೇಮನಾಥ್ ಶೆಟ್ಟಿಯವರಿಂದ ನಡೆದ ರಾಜಕೀಯ ಕ್ಷಿಪ್ರ ಬೆಳವಣಿಗೆ ಮೂಲಕ ಮರುದಿನ ಚುನಾವಣೆ ನಡೆದಾಗ 7, 7 ಸಮಬಲವೇ ಕಾಯ್ದುಕೊಂಡಿತ್ತು. ಟಾಸ್ ಮೂಲಕ ಅಧಿಕಾರ ಬಿಜೆಪಿ ಪಾಲಾಯಿತು.
ಈ ಬಾರಿ ಬಿಜೆಪಿಯಿಂದ ಅಸಮಾಧಾನಗೊಂಡಿದ್ದ ಹರೀಶ್, ಶ್ಯಾಮಲ ಮತ್ತು ದೇವಕಿ ಎಂಬ ಮೂವರು ಬಿಜೆಪಿ ಬೆಂಬಲಿತ ಸದಸ್ಯರು ಕೆದಿಲ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪ್ರವೀಣ್ ಚಂದ್ರ ಶೆಟ್ಟಿ ಕಲ್ಲಾಜೆ , ಗ್ರಾಮ ಪಂಚಾಯತಿ ಸದಸ್ಯರಾದ ಅಜೀಝ್ ಸತ್ತಿಕಲ್ಲು , ಮತ್ತು ಎನ್ ಎಸ್ ಯು ಐ ರಾಜ್ಯ ಉಪಾಧ್ಯಕ್ಷರು ಫಾರೂಕ್ ಬಾಯಬೆ ಜೊತೆ ಸಂಪರ್ಕದಲ್ಲಿದ್ದುಕೊಂಡು ಇಂದು ಬೆಳಿಗ್ಗೆ ಕ್ಷೇತ್ರದ ಶಾಸಕರು ಅಶೋಕ್ ಕುಮಾರ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಅಧ್ಯಕ್ಷ ಸ್ಥಾನಕ್ಕೆ ಹರೀಶ್ (ಸಾಮಾನ್ಯ ) ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿ ಫಾತುಮ್ಮ ( ಸಾಮಾನ್ಯ ಮಹಿಳೆ) ಯವರು ಬಹುಮತದಿಂದ ಆಯ್ಕೆಯಾದರು

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!