ಜನ ಮನದ ನಾಡಿ ಮಿಡಿತ

Advertisement

ಬಂಟರ ಸಂಘ ಪುತ್ತಿಗೆ ನೇತೃತ್ವದಲ್ಲಿ ಆ.13 ರಂದು ‘ಆಟಿದಕೂಟ’ ಕಾರ್ಯಕ್ರಮ

ಬಂಟರ ಸಂಘ ಪುತ್ತಿಗೆ ನೇತೃತ್ವದಲ್ಲಿ ಇದೇ ಬರುವ ಆ.13 ರಂದು ‘ಆಟಿದಕೂಟ ಕಾರ್ಯಕ್ರಮವು ಪುತ್ತಿಗೆ ಎಜೆಬಿ ಶಾಲಾ ವಠಾರದಲ್ಲಿ ಅದ್ದೂರಿಯಾಗಿ ನಡೆಯಲಿದೆ.


ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟನೆಗೊಳ್ಳಿದ್ದು, ಬಳಿಕ ಗ್ರಾಮ ಪಂಚಾಯತ್ ಮಟ್ಟದ ಬಂಟ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮೇಳೈಸಲಿದೆ.
ಗ್ರಾಮದ ಆಜಲು ದೈವನರ್ತಕರಿಂದ ‘ಆಟಿಕಳಂಜ’ ನಡೆಯಲಿದ್ದು, ಇದು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಿದೆ.
ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಪುತ್ತಿಗೆ ಬಂಟರ ಸಂಘದ ಗೌರವಾಧ್ಯಕ್ಷರಾದ ಸತೀಶ್ ಭಂಡಾರಿ ಕೋಳಾರು ವಹಿಸಲಿದ್ದಾರೆ. ಬಂಟ ಸಮುದಾಯದ ಸಾಧಕರಿಗೆ ಸನ್ಮಾನದ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ.


ಇನ್ನೂ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಸಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಅಡ್ಡ ಸುಬ್ಬಯ್ಯ ರೈ, ಹೇರಂಬ ಇಂಡಸ್ಟಿçÃಸ್ ಮುಂಬಯಿ ಇದರ ಅಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ, ಪುತ್ತಿಗೆ ಗ್ರಾಮ ಪಂಚಾಯಿತಿ ಅಧಕ್ಷ ಡಿ. ಸುಬ್ಬಣ್ಣ ಆಳ್ವ, ಮಂಗಳೂರು ಮಾತೃ ಸಂಘದ ಆಶಾ ಜ್ಯೋತಿ ರೈ, ಮಂಗಳೂರಿನ ಸಾಗರ್ ಕನ್‌ಸ್ಟçಕ್ಷನ್‌ನ ಗಿರಿಧರ ಶೆಟ್ಟಿ ನೈಮೊಗರು ಬಾರಿಕೆ, ಬೆಳ್ಳೂರು ಮಹಿಳಾ ಸಂಘದ ಅಧ್ಯಕ್ಷೆ ಡಾ, ವಿದ್ಯಾ ಮೋಹನ್‌ದಾಸ್ ರೈ, ಅಭಿಮತ ಟಿವಿಯ ಮುಖ್ಯಸಂಪಾದಕಿ ಡಾ. ಮಮತಾ ಶೆಟ್ಟಿ, ಕಾಸರಗೋಡಿನ ಜಿಲ್ಲಾ ಬಂಟರ ಸಂಘದ ಉಪಾಧ್ಯಕ್ಷ ಚಂದ್ರಹಾಸ ರೈ ಪರಡಾಲಗುತ್ತು ಭಾಗಿವಹಿಸಲಿದ್ದಾರೆ. ಇನ್ನೂ ಆಟಿದ ಕೂಟದಲ್ಲಿ ಪುತ್ತಿಗೆ ಬಂಟ ಗಾಯಕರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!