ಜನ ಮನದ ನಾಡಿ ಮಿಡಿತ

Advertisement

ರೈಲಿನಲ್ಲಿ ಅಕ್ರಮ ಗಾಂಜಾ ಸಾಗಾಟ-3.16 ಲಕ್ಷ ರೂ. ಮೌಲ್ಯದ ಗಾಂಜಾ ವಶ

ಮಂಗಳೂರು: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಅನಾಮಧೇಯ ಬ್ಯಾಗ್ ನಲ್ಲಿ ಪತ್ತೆಯಾದ ಗಾಂಜಾವನ್ನು ರೈಲ್ವೇ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಗುರುವಾರ ಬೆಳಗ್ಗೆ ೧೧.೧೫ ರ ಸುಮಾರಿಗೆ ಮಂಗಳೂರು ರೈಲ್ವೇ ನಿಲ್ದಾಣದ ಎರಡನೇ ಫ್ಲ್ಯಾಟ್‌ ಫಾರಂನಲ್ಲಿ ನಿಲುಗಡೆಗೊಂಡಿದ್ದ ಕಾರವಾರ-ಯಶವಂತಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ 3,16,650 ರೂಪಾಯಿ ಮೌಲ್ಯದ 6.333 ಕೇಜಿ ತೂಕದ ಒಣ ಗಾಂಜಾ ಪತ್ತೆಯಾಗಿತ್ತು. ರೈಲಿನ ನಿತ್ಯ ತಪಾಸಣೆ ವೇಳೆ ಸಿಕ್ಕ ಅನಾಮಧೇಯ ಬ್ಯಾಗ್‌ನಲ್ಲಿ ಗಾಂಜಾ ಪತ್ತೆಯಾಗಿದೆ. ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ. ಮಂಗಳೂರು ಪೂರ್ವಬಕಾರಿ ವಿಭಾಗದಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಪಾಲ್ಘಾಟ್‌ ವಿಭಾಗದ ಸಿಐಬಿ ಮುಖ್ಯ ನಿರೀಕ್ಷಕ ಎನ್‌. ಕೇಸವದಾಸ್‌, ಮಂಗಳೂರು ಜಂಕ್ಷನ್‌ ಇನ್‌ಸ್ಪೆಕ್ಟರ್‌ ಮನೋಜ್‌ ಕುಮಾರ್‌ ಯಾದವ್‌, ಸಿಐಬಿ ಎಸ್‌ಐ ದೀಪಕ್‌ ಎ.ಪಿ., ಅಜಿತ್‌ ಅಶೋಕ್‌ ಎ.ಪಿ, ಎಎಸ್‌ಐ ಸಾಜು ಕೆ., ಎಸ್‌.ಎಂ. ರವಿ., ಮಂಗಳೂರು ಜಂಕ್ಷನ್‌ ಎಎಸ್‌ಐ ಕೆ. ಶಶಿ, ಸಿಐಬಿ ಹೆಡ್‌ ಕಾನ್‌ಸ್ಟೆಬಲ್‌ ಎನ್‌. ಅಶೋಕ್‌, ಅಜೀಶ್‌ ಒ.ಕೆ., ಜಂಕ್ಷನ್‌ ಕಾನ್‌ಸ್ಟೆಬಲ್‌ ಟಿ.ಪಾಂಡುರಂಗ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!