ಜನ ಮನದ ನಾಡಿ ಮಿಡಿತ

Advertisement

ಮಂದಾರ ತ್ಯಾಜ್ಯ ದುರಂತ, ಸಿಕ್ಕಿಲ್ಲ ಪರಿಹಾರ, ಈಡೇರಿಲ್ಲ ಭರವಸೆ, ಪರಿಹಾರ ನೀಡುವಲ್ಲಿ ವಿಫಲತೆ

ದಕ್ಷಿಣ ಕನ್ನಡ : ಮಂಗಳೂರಿನಲ್ಲಿ 2019ರ ಆಗಸ್ಟ್ 6ರಂದು ದೇಶ ಕಂಡು ಕೇಳದೆ ಭೀಕರ ತ್ಯಾಜ್ಯ ದುರಂತದಲ್ಲಿ ಸರ್ವಸ್ವವನ್ನು ಕಳೆದುಕೊಂಡ ಸಂತ್ರಸ್ತರಿಗೆ ಪೂರ್ಣ ಪ್ರಮಾಣದ ಪರಿಹಾರ ಇನ್ನೂ ಕೂಡ ಮರೀಚಿಕೆಯಾಗಿ ಉಳಿದಿದೆ.


ಘಟನೆ ಸಂಭವಿಸಿ 48 ತಿಂಗಳುಗಳ ಕಳೆದಿದ್ದು ಅಂದು ಜನಪ್ರತಿನಿಧಿಗಳು ಅಧಿಕಾರಿಗಳು ಬಂದು ಮೂರು ತಿಂಗಳ ಒಳಗಾಗಿ ಪೂರ್ಣಕಾಲಿಕ ಪರಿಹಾರ ನೀಡುವ ಭರವಸೆಯನ್ನು ನೀಡಿದ್ದರು ಆದರೆ ಅದು ಇಂದಿಗೂ ಈಡೇರದೆ ಇರುವುದು ವಿಪರ್ಯಾಸ.
ಅಂದು ಭರವಸೆ ನೀಡಿದ ಜನಪ್ರತಿನಿಧಿಗಳು ಕೈ ಚೆಲ್ಲಿ ಕುಳಿತಿದ್ದಾರೆ ಅಥವಾ ಪ್ರಕರಣವನ್ನು ಮರೆತಿದ್ದಾರೆ ಅಂದು ಅಧಿಕಾರದಲ್ಲಿದ್ದ ಅಧಿಕಾರಿಗಳು ಬೇರೆಡೆ ವರ್ಗಾವಣೆ ಹೊಂದಿದ್ದಾರೆ ಅಥವಾ ನಿವೃತ್ತರಾಗಿರಬಹುದು ಅಥವಾ ಕೆಲಸ ತೊರೆದಿರುವ ಸಾಧ್ಯತೆಯೂ ಇದೆ.
ಆದರೆ ಅಂದಿನ ಭರವಸೆಯನ್ನ ನಂಬಿದ ಸಂತ್ರಸ್ತರು ತನ್ನ ಸರ್ವಸ್ವನ್ನು ಕಳಕೊಂಡು ಸಂತ್ರಸ್ತರು ಮಂಕಾಗಿದ್ದಾರೆ ಕೆಲವರು ಇಹಲೋಕವನ್ನು ತ್ಯಜಿಸಿದ್ದಾರೆ ಇನ್ನು ಕೆಲವರು ಮಾನಸಿಕ ಖಿನ್ನತೆ ಒಳಗಾಗಿದ್ದಾರೆ.


ಅಂದು ಆಡಳಿತದಲ್ಲಿದ್ದ ಜನಪ್ರತಿನಿಧಿಗಳು ಇಂದು ಪ್ರತಿಪಕ್ಷದಲ್ಲಿ ಕುಳಿತಿದ್ದಾರೆ, ಅಂದು ಪ್ರತಿಪಕ್ಷದಲ್ಲಿ ಇದ್ದವರು ಇಂದು ಆಡಳಿತ ನಡೆಸುತ್ತಿದ್ದಾರೆ. ಆದರೂ ಸಂತ್ರಸ್ತರ ಸಮಸ್ಯೆ ಬಗೆ ಹರಿದಿಲ್ಲ. ಅಂದು ಮಂದಾರ ತ್ಯಾಜ್ಯ ದುರಂತ ಸ್ಥಳಕ್ಕೆ ಭೇಟಿ ನೀಡಿದ್ದ ಮತ್ತು ಸಂತ್ರಸ್ತರಿಗೆ ಪರಿಹಾರಕ್ಕೆ ಒತ್ತಾಯಿಸಿದ್ದ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ, ಮಾನ್ಯ ಉಚ್ಚ ನ್ಯಾಯಾಲಯದ ಆದೇಶದಂತೆ ಸಂತ್ರಸ್ತರಿಗೆ ಮಧ್ಯಂತರ ಪರಿಹಾರ ಮತ್ತು ಕೃಷಿ ಪರಿಹಾರ ದೊರಕಿರುತ್ತದೆ. ಪೂರ್ಣ ಪ್ರಮಾಣದ ಪರಿಹಾರಕ್ಕಾಗಿ ಸಂತ್ರಸ್ತರು ಕಾಯುತ್ತಿದ್ದಾರೆ.

ಧಾರ್ಮಿಕ ನಂಬಿಕೆಗಳು ತ್ಯಾಜ್ಯದ ಒಳಗೆ ಹುದುಗಿ ಹೋಗಿವೆ, ದೈವಸ್ಥಾನ ನಾಗಬನ ಕಣ್ಮರೆಯಾಗಿದೆ, ಅದು ಮರು ಸ್ಥಾಪಿಸಿಕೊಡುತ್ತೇವೆ ಎಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭರವಸೆ ನೀಡಿದ್ದರು, ಅದಕ್ಕೆ ಸಂಬಂಧಪಟ್ಟವರು ಪರಿಹಾರವನ್ನು ಪಡೆದುಕೊಂಡಿಲ್ಲ, ಈಗ ಎಷ್ಟು ಬಾರಿ ಕಚೇರಿಗೆ ಅಲೆದಾಡಿದರು, ಮನವಿ ನೀಡಿದ್ರು ಸ್ಪಂದಿಸುತ್ತಿಲ್ಲ.
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಂಪರ್ಕಕ್ಕಾಗಿ ಅಲೆದು ಅಲೆದು ಆರೋಗ್ಯವೇ ಹಾಳಾಗಿದ್ದೇ ವಿನಹ ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಸಂತ್ರಸ್ತ ಡಾಕ್ಟರ್ ಮಂದಾರ ರಾಜೇಶ್ ಭಟ್.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!