ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಹದಿಹರೆಯದ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು ಕುಞಾಯಿಶ

ಕಾಟುಕುಕ್ಕೆ: ಹದಿಹರೆಯದ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಕೇರಳ ವನಿತಾ ಕಮಿಷನ್ ಸದಸ್ಯೆ ಕುಞಾಯಿಶ ಕರೆನೀಡಿದರು. ಪ್ರೀತಿ ಭಂಗದಂತಹ ಸಮಯದಲ್ಲಿ ವಿದ್ಯಾರ್ಥಿಗಳು ಆಕ್ರಮಣಕಾರಿಯಾಗಿ ವರ್ತಿಸುವ ನಡವಳಿಕೆಗೆದುರಾಗಿಯೂ ಅವರು ತಿಳಿಹೇಳಿದರು. ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ‘ಹದಿಹರೆಯದ ವಿದ್ಯಾರ್ಥಿಗಳನ್ನು ಶಕ್ತಿಪಡಿಸೋಣ’ ಎಂಬ ಕೇರಳ ರಾಜ್ಯದ ವನಿತಾ ಆಯೋಗ ನಡೆಸುವ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.


ಕಾರ್ಯಕ್ರಮದಲ್ಲಿ ಎಣ್ಮಕಜೆ ಪಂಚಾಯತ್ ಅಧ್ಯಕ್ಷ ಸೋಮಶೇಖರ ಜೆ ಎಸ್,ಶಾಲಾ ಮೆನೇಜರ್ ಮಿತ್ತೂರ್ ಪುರುಷೋತ್ತಮ ಭಟ್,ವಾರ್ಡ್ ಸದಸ್ಯ ,ಬಿ.ಎಸ್ ಗಾಂಭೀರ್,ಶಾಲಾ ಹೆಡ್ ಮಾಸ್ಟರ್ ಹರಿಪ್ರಸಾದ್ ಶೆಟ್ಟಿ,ಪಿ ಟಿ ಎ ಅಧ್ಯಕ್ಷ ರಾಧಾಕೃಷ್ಣ ಆಚಾರ್ಯ,ಆಡಳಿತ ಮಂಡಳಿ ಸದಸ್ಯ ನಿವೃತ್ತ ಶಾಲಾ ಅಧ್ಯಾಪಕ ಲೋಕನಾಥಾ ಶೆಟ್ಟಿ ಮಾತನಾಡಿದರು. ಆಡಳಿತ ಮಂಡಳಿ ಅಧ್ಯಕ್ಷ ಸಂಜೀವ ರೈ ಕಾರ್ಯಕ್ರಮ ದಲ್ಲಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕಮದಲ್ಲಿ ಪ್ರಿನ್ಸಿಪಾಲ್ ಪದ್ಮನಾಭ ಶೆಟ್ಟಿ ಸ್ವಾಗತಿಸಿ, ವಾಣಿ ಕೆ ವಂದಿಸಿದರು. ರಾಜೇಶ್ ಸಿ ಎಚ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ನಿರ್ಮಲ್ ಕುಮಾರ್ ಕಾರಡ್ಕ ಅವರ ತರಗತಿ ನಡೆಯಿತು. ಅಧ್ಯಾಪಕ ಸಂದೀಪ್ ಕುಮಾರ್ ನೇತೃತ್ವ ವಹಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!