ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಹದಿಹರೆಯದ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು ಕುಞಾಯಿಶ

ಕಾಟುಕುಕ್ಕೆ: ಹದಿಹರೆಯದ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಕೇರಳ ವನಿತಾ ಕಮಿಷನ್ ಸದಸ್ಯೆ ಕುಞಾಯಿಶ ಕರೆನೀಡಿದರು. ಪ್ರೀತಿ ಭಂಗದಂತಹ ಸಮಯದಲ್ಲಿ ವಿದ್ಯಾರ್ಥಿಗಳು ಆಕ್ರಮಣಕಾರಿಯಾಗಿ ವರ್ತಿಸುವ ನಡವಳಿಕೆಗೆದುರಾಗಿಯೂ ಅವರು ತಿಳಿಹೇಳಿದರು. ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ‘ಹದಿಹರೆಯದ ವಿದ್ಯಾರ್ಥಿಗಳನ್ನು ಶಕ್ತಿಪಡಿಸೋಣ’ ಎಂಬ ಕೇರಳ ರಾಜ್ಯದ ವನಿತಾ ಆಯೋಗ ನಡೆಸುವ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.


ಕಾರ್ಯಕ್ರಮದಲ್ಲಿ ಎಣ್ಮಕಜೆ ಪಂಚಾಯತ್ ಅಧ್ಯಕ್ಷ ಸೋಮಶೇಖರ ಜೆ ಎಸ್,ಶಾಲಾ ಮೆನೇಜರ್ ಮಿತ್ತೂರ್ ಪುರುಷೋತ್ತಮ ಭಟ್,ವಾರ್ಡ್ ಸದಸ್ಯ ,ಬಿ.ಎಸ್ ಗಾಂಭೀರ್,ಶಾಲಾ ಹೆಡ್ ಮಾಸ್ಟರ್ ಹರಿಪ್ರಸಾದ್ ಶೆಟ್ಟಿ,ಪಿ ಟಿ ಎ ಅಧ್ಯಕ್ಷ ರಾಧಾಕೃಷ್ಣ ಆಚಾರ್ಯ,ಆಡಳಿತ ಮಂಡಳಿ ಸದಸ್ಯ ನಿವೃತ್ತ ಶಾಲಾ ಅಧ್ಯಾಪಕ ಲೋಕನಾಥಾ ಶೆಟ್ಟಿ ಮಾತನಾಡಿದರು. ಆಡಳಿತ ಮಂಡಳಿ ಅಧ್ಯಕ್ಷ ಸಂಜೀವ ರೈ ಕಾರ್ಯಕ್ರಮ ದಲ್ಲಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕಮದಲ್ಲಿ ಪ್ರಿನ್ಸಿಪಾಲ್ ಪದ್ಮನಾಭ ಶೆಟ್ಟಿ ಸ್ವಾಗತಿಸಿ, ವಾಣಿ ಕೆ ವಂದಿಸಿದರು. ರಾಜೇಶ್ ಸಿ ಎಚ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ನಿರ್ಮಲ್ ಕುಮಾರ್ ಕಾರಡ್ಕ ಅವರ ತರಗತಿ ನಡೆಯಿತು. ಅಧ್ಯಾಪಕ ಸಂದೀಪ್ ಕುಮಾರ್ ನೇತೃತ್ವ ವಹಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!