ಜನ ಮನದ ನಾಡಿ ಮಿಡಿತ

Advertisement

ಮುಂಗುಸಿಯ ಪ್ರಾಣ ಉಳಿಸಲು ಹೋಗಿ ರಿಕ್ಷಾ ಪಲ್ಟಿ; ಚಾಲಕನಿಗೆ ಗಾಯ

ವಿಟ್ಲ: ರಸ್ತೆಗೆ ಅಡ್ಡ ಬಂದ ಮುಂಗುಸಿಯನ್ನೂ ಉಳಿಸಲು ಹೋಗಿ ರಿಕ್ಷಾ ಪಲ್ಟಿ ಹೊಡೆದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಆಟೋ ಚಾಲಕ ಮಂಗಲಪದವು ನಿವಾಸಿ ಇಸ್ಮಾಯಿಲ್ (53) ಗಾಯಗೊಂಡಿದ್ದಾರೆ.

ಇಂದು ಬೆಳಗ್ಗೆ ವಿಟ್ಲದಿಂದ ಸಾಲೆತ್ತೂರು ಕಡೆಗೆ ಪ್ರಯಾಣಿಕರನ್ನು ಬಿಟ್ಟು ಮತ್ತೆ ವಿಟ್ಲಕ್ಕೆ ಹಿಂತಿರುಗುತ್ತಿದ್ದಾಗ ಕೊಡಂಗಾಯಿ ಸಮೀಪ ಮುಂಗುಸಿಯೊಂದು ಅಡ್ಡಬಂದಿದೆ. ವೇಗವಾಗಿ ಚಲಿಸುತ್ತಿದ್ದ ರಿಕ್ಷಾ ಚಾಲಕ ಮುಂಗುಸಿಯ ಪ್ರಾಣ ಉಳಿಸಲು ಹಠಾತ್ ಬ್ರೇಕ್ ಹಾಕಿದ್ದಾರೆ. ತಕ್ಷಣ ನಿಯಂತ್ರಣ ತಪ್ಪಿದ ಆಟೋ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಅಪ್ಪಳಿಸಿದೆ.

ಘಟನೆಯಲ್ಲಿ ಚಾಲಕ ಇಸ್ಮಾಯಿಲ್ ಗಾಯಗೊಂಡಿದ್ದು, ಆಟೋ ಮುಂಭಾಗ ಜಖಂಗೊಂಡಿದೆ. ಅಪಘಾತದಲ್ಲಿ ಗಾಯಗೊಂಡ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

error: Content is protected !!