ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಬಾಡಿಗೆ ಮನೆ ವಿಚಾರಕ್ಕೆ ಗಲಾಟೆ – ಟಾರ್ಗೆಟ್‌ ತಂಡದ ನಟೋರಿಯಸ್ ಆರೋಪಿ ಕೊಲೆಗೆ ಯತ್ನ..!

ನಟೋರಿಯಸ್ ಆರೋಪಿ, ಟಾರ್ಗೆಟ್ ತಂಡಕ್ಕೆ ಸೇರಿದ ಉಳ್ಳಾಲ ಕೋಟೆಪುರ ನಿವಾಸಿ ನಮೀರ್ ಹಂಝ ಎಂಬಾತ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿ ಕತ್ತಿಯಿಂದ ಕಡಿದು ನೆತ್ತಿಲ ಪದವು ನಿವಾಸಿ ಮನ್ಸೂರ್‌(40) ಎಂಬಾತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ಆ.13ರಂದು ತಡರಾತ್ರಿ ನಡೆದಿದೆ.

ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆಗೆಂದು ನೆತ್ತಿಲಪದವು ಬಳಿಯಿರುವ ಮನ್ಸೂರ್ ಸಂಬಂಧಿಕರಿಗೆ ಸೇರಿದ ಮನೆಗೆ ಬಂದಿದ್ದರು. ಆದರೆ ಮನ್ಸೂರ್ ಇದನ್ನು ತಡೆದು, ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಮನೆಯವರಿಗೆ ತಿಳಿಸಿದ್ದರು. ಇದರಿಂದ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನಚಕಮಕಿ ನಡೆದು, ಪರಸ್ಪರ ಹೊಡೆದಾಟಕ್ಕೂ ಕಾರಣವಾಯಿತು. ಇದೇ ದ್ವೇಷದಲ್ಲಿ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಕೃತ್ಯ ಬಳಿಕ ಆರೋಪಿ ತಲೆಮರೆಸಿದ್ದಾನೆ.

ಉಳ್ಳಾಲದಲ್ಲಿ ಹನಿಟ್ರ್ಯಾಪ್, ಮುಕ್ಕಚ್ಚೇರಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸಹಿತ ವಿವಿಧ ಕೊಲೆ ಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿತ್ತು. ಇಲ್ಯಾಸ್ ಕೊಲೆ ನಂತರ ತಂಡದ ಕೃತ್ಯಗಳು ಕಡಿಮೆಯಾಗಿತ್ತು. ಇದೇ ತಂಡದಲ್ಲಿದ್ದುಕೊಂಡ ಹಂಝ ಕೂಡಾ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದನು ಎನ್ನಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!