ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಬಾಡಿಗೆ ಮನೆ ವಿಚಾರಕ್ಕೆ ಗಲಾಟೆ – ಟಾರ್ಗೆಟ್‌ ತಂಡದ ನಟೋರಿಯಸ್ ಆರೋಪಿ ಕೊಲೆಗೆ ಯತ್ನ..!

ನಟೋರಿಯಸ್ ಆರೋಪಿ, ಟಾರ್ಗೆಟ್ ತಂಡಕ್ಕೆ ಸೇರಿದ ಉಳ್ಳಾಲ ಕೋಟೆಪುರ ನಿವಾಸಿ ನಮೀರ್ ಹಂಝ ಎಂಬಾತ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿ ಕತ್ತಿಯಿಂದ ಕಡಿದು ನೆತ್ತಿಲ ಪದವು ನಿವಾಸಿ ಮನ್ಸೂರ್‌(40) ಎಂಬಾತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ಆ.13ರಂದು ತಡರಾತ್ರಿ ನಡೆದಿದೆ.

ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆಗೆಂದು ನೆತ್ತಿಲಪದವು ಬಳಿಯಿರುವ ಮನ್ಸೂರ್ ಸಂಬಂಧಿಕರಿಗೆ ಸೇರಿದ ಮನೆಗೆ ಬಂದಿದ್ದರು. ಆದರೆ ಮನ್ಸೂರ್ ಇದನ್ನು ತಡೆದು, ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಮನೆಯವರಿಗೆ ತಿಳಿಸಿದ್ದರು. ಇದರಿಂದ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನಚಕಮಕಿ ನಡೆದು, ಪರಸ್ಪರ ಹೊಡೆದಾಟಕ್ಕೂ ಕಾರಣವಾಯಿತು. ಇದೇ ದ್ವೇಷದಲ್ಲಿ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಕೃತ್ಯ ಬಳಿಕ ಆರೋಪಿ ತಲೆಮರೆಸಿದ್ದಾನೆ.

ಉಳ್ಳಾಲದಲ್ಲಿ ಹನಿಟ್ರ್ಯಾಪ್, ಮುಕ್ಕಚ್ಚೇರಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸಹಿತ ವಿವಿಧ ಕೊಲೆ ಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿತ್ತು. ಇಲ್ಯಾಸ್ ಕೊಲೆ ನಂತರ ತಂಡದ ಕೃತ್ಯಗಳು ಕಡಿಮೆಯಾಗಿತ್ತು. ಇದೇ ತಂಡದಲ್ಲಿದ್ದುಕೊಂಡ ಹಂಝ ಕೂಡಾ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದನು ಎನ್ನಲಾಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!