ಜನ ಮನದ ನಾಡಿ ಮಿಡಿತ

Advertisement

ಆಸ್ತಿ ವಿಚಾರ ತಂದೆಯನ್ನೇ ಕೊಲೆಗೈದ ಪಾಪಿ ಮಗ

ಆಸ್ತಿ ಮಾರಾಟದಿಂದ ಬಂದ ಹಣಕಾಸಿನ ವಿಚಾರಕ್ಕೆ ತನ್ನ ತಂದೆ, ತಾಯಿ ಮೇಲೆ ಮಗ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ.


ಮಗ ಹಲ್ಲೆಯಿಂದಾಗಿ ತಂದೆ ಸಾವನ್ನಪ್ಪಿದ್ದು, ತಾಯಿ ಸ್ಥಿತಿ ಗಂಭೀರವಾಗಿದೆ. ಇದೇ ವೇಳೆ ಮಧ್ಯವರ್ತಿ ಮೇಲೂ ಹಲ್ಲೆ ಮಾಡಿ ಆರೋಪಿ ಹತ್ಯೆಗೈದಿದ್ದಾನೆ.


ತಂದೆ ಭಾಸ್ಕರ್ ಗೌಡ, ಆಸ್ತಿ ಮಾರಾಟದ ಮಧ್ಯವರ್ತಿ ಕಾರ್ತಿಕ್ (45) ಕೊಲೆಯಾದವರು. ತಾಯಿ ಮೇಲೂ ಹಲ್ಲೆ ಮಾಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ ಸಂತೋಷ್ ಇಬ್ಬರನ್ನು ಕೊಲೆ ಹಾಗೂ ತಾಯಿ ಮೇಲೆ ಹಲ್ಲೆ ಮಾಡಿ ನೇರವಾಗಿ ಠಾಣೆಗೆ ಹೋಗಿದ್ದಾನೆ.


ತಂದೆ-ತಾಯಿ ಹಾಗೂ ಜಮೀನು ಮಾರಾಟ ಮಾಡಲು ಮಧ್ಯಸ್ಥಿಕೆ ವಹಿಸಿದ್ದ ಮಧ್ಯವರ್ತಿ ಮೇಲೆ ಹಣಕಾಸಿನ ಬಗ್ಗೆ ಸಂಬ0ಧಿಸಿದ0ತೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತಂದೆ, ಮಧ್ಯವರ್ತಿ ಮೃತಪಟ್ಟರೇ, ತಾಯಿ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಂತೋಷ್‌ಗೆ ಸೇರಿದ ಜಮೀನನ್ನು ಮಾರಾಟ ಮಾಡಲು ಕಾರ್ತಿಕ್ ಮಧ್ಯಸ್ಥಿಕೆ ವಹಿಸಿದ್ದನು. ಇದರಿಂದ 12 ಲಕ್ಷ ರೂಪಾಯಿಗಳ ವಿಚಾರಕ್ಕೆ ಸಂಬ0ಧಿಸಿದ0ತೆ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಹತ್ಯೆ ಬಳಿಕ ಆರೋಪಿ ನೇರ ಠಾಣೆಗೆ ಹೋಗಿದ್ದಾನೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!