ಜನ ಮನದ ನಾಡಿ ಮಿಡಿತ

Advertisement

ಆಸ್ತಿ ವಿಚಾರ ತಂದೆಯನ್ನೇ ಕೊಲೆಗೈದ ಪಾಪಿ ಮಗ

ಆಸ್ತಿ ಮಾರಾಟದಿಂದ ಬಂದ ಹಣಕಾಸಿನ ವಿಚಾರಕ್ಕೆ ತನ್ನ ತಂದೆ, ತಾಯಿ ಮೇಲೆ ಮಗ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ.


ಮಗ ಹಲ್ಲೆಯಿಂದಾಗಿ ತಂದೆ ಸಾವನ್ನಪ್ಪಿದ್ದು, ತಾಯಿ ಸ್ಥಿತಿ ಗಂಭೀರವಾಗಿದೆ. ಇದೇ ವೇಳೆ ಮಧ್ಯವರ್ತಿ ಮೇಲೂ ಹಲ್ಲೆ ಮಾಡಿ ಆರೋಪಿ ಹತ್ಯೆಗೈದಿದ್ದಾನೆ.


ತಂದೆ ಭಾಸ್ಕರ್ ಗೌಡ, ಆಸ್ತಿ ಮಾರಾಟದ ಮಧ್ಯವರ್ತಿ ಕಾರ್ತಿಕ್ (45) ಕೊಲೆಯಾದವರು. ತಾಯಿ ಮೇಲೂ ಹಲ್ಲೆ ಮಾಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ ಸಂತೋಷ್ ಇಬ್ಬರನ್ನು ಕೊಲೆ ಹಾಗೂ ತಾಯಿ ಮೇಲೆ ಹಲ್ಲೆ ಮಾಡಿ ನೇರವಾಗಿ ಠಾಣೆಗೆ ಹೋಗಿದ್ದಾನೆ.


ತಂದೆ-ತಾಯಿ ಹಾಗೂ ಜಮೀನು ಮಾರಾಟ ಮಾಡಲು ಮಧ್ಯಸ್ಥಿಕೆ ವಹಿಸಿದ್ದ ಮಧ್ಯವರ್ತಿ ಮೇಲೆ ಹಣಕಾಸಿನ ಬಗ್ಗೆ ಸಂಬ0ಧಿಸಿದ0ತೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತಂದೆ, ಮಧ್ಯವರ್ತಿ ಮೃತಪಟ್ಟರೇ, ತಾಯಿ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಂತೋಷ್‌ಗೆ ಸೇರಿದ ಜಮೀನನ್ನು ಮಾರಾಟ ಮಾಡಲು ಕಾರ್ತಿಕ್ ಮಧ್ಯಸ್ಥಿಕೆ ವಹಿಸಿದ್ದನು. ಇದರಿಂದ 12 ಲಕ್ಷ ರೂಪಾಯಿಗಳ ವಿಚಾರಕ್ಕೆ ಸಂಬ0ಧಿಸಿದ0ತೆ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಹತ್ಯೆ ಬಳಿಕ ಆರೋಪಿ ನೇರ ಠಾಣೆಗೆ ಹೋಗಿದ್ದಾನೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!