ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ಮಕ್ಕಳು ದೃಢ ಸಂಕಲ್ಪದಿಂದ ಶಿಕ್ಷಣ ಪಡೆದರೆ ಸಾಧಕರಾಗಲು ಸಾಧ್ಯ- ವೇ.ಮೂ. ಸುಬ್ರಹ್ಮಣ್ಯ ರಾವ್

ಮುಲ್ಕಿ: ಶಿವಳ್ಳಿ ಸ್ಪಂದನ ಮಂಗಳೂರು ವಲಯದ ಸಹಯೋಗದೊಂದಿಗೆ ಶಿವಳ್ಳಿ ಸ್ಪಂದನ ಪಾವಂಜೆ ಸಹಭಾಗಿತ್ವದಲ್ಲಿ ಪ್ರತಿಭಾ ಪುರಸ್ಕಾರ -2023 ಕಾರ್ಯಕ್ರಮ ಹಳೆಯಂಗಡಿ ಶ್ರೀ ರಾಮಾನುಗ್ರಹ ಸಭಾಗೃಹ ದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ವೇ.ಮೂ. ಸುಬ್ರಹ್ಮಣ್ಯ ರಾವ್ ತೋಕೂರು ರವರು ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿ ಇಂದಿನ ದಿನಗಳಲ್ಲಿ ರಾಷ್ಟ್ರ ನಮಗೇನು ಮಾಡಿದೆ ಎಂದು ಕೇಳುವುದಕ್ಕಿಂತ ರಾಷ್ಟ್ರದಲ್ಲಿ ಸುಭಿಕ್ಷೆಗಾಗಿ ನಾವು ತ್ಯಾಗ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು. ಅವರು ಮಾತನಾಡಿ ಇಂದಿನ ಯುಗದಲ್ಲಿ ಕಲಿಕೆಗೆ ಅನೇಕ ಮೂಲಭೂತ ಸೌಕರ್ಯಗಳು ದೊರೆಯುತ್ತಿದ್ದು ಮಕ್ಕಳು ದೃಢ ಸಂಕಲ್ಪದಿಂದ ಶಿಕ್ಷಣ ಪಡೆದರೆ ಸಾಧಕರಾಗಲು ಸಾಧ್ಯ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಳ್ಳಿ ಸ್ಪಂದನ ಮಂಗಳೂರು ವಲಯದ ಅಧ್ಯಕ್ಷ ಕೃಷ್ಣ ಭಟ್ ಕದ್ರಿ ವಹಿಸಿ ಮಾತನಾಡಿ ಸಂಘಟನೆಯ ಕಾರ್ಯವನ್ನು ಶ್ಲಾಘಿಸಿ ಸೇವಾ ಕಾರ್ಯಗಳು ನಿರಂತರವಾಗಿ ನಡೆಯಲಿ ಎಂದರು
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಧಾರ್ಮಿಕ ಚಿಂತಕ ಅಂಗಡಿಮಾರು ದೇವೇಶ್ ಭಟ್ ಸುರತ್ಕಲ್ ಎನ್ ಐ ಟಿ ಕೆ ಡೀನ್ ಶ್ರೀಕಾಂತ್ ಎಸ್ ರಾವ್ , ಕಟೀಲು ಕಾಲೇಜಿನ ಉಪನ್ಯಾಸಕ ವಾಧಿರಾಜ ರಾವ್,ನಿವೃತ್ತ ಶಿಕ್ಷಕ ರಾಜಕುಮಾರ ಕೊಳುವೈಲು, ಕಾರ್ಯದರ್ಶಿ ಗಣೇಶ್ ಹೆಬ್ಬಾರ್, ಕೇಂದ್ರೀಯ ವಲಯದ ಉಸ್ತುವಾರಿ ಗಣೇಶ್ ತಂತ್ರಿ, ತಾಲೂಕು ವಲಯದ ಮಹಿಳಾ ಘಟಕದ ಅಧ್ಯಕ್ಷೆ ರಮಾಮಣಿ, ಪಾವಂಜೆ ವಲಯದ ಅಧ್ಯಕ್ಷ ಸತೀಶ್ ಭಟ್, ಕಾರ್ಯದರ್ಶಿ ಪ್ರಸನ್ನ ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಸುಧಾಮಣಿ, ಮಾಧ್ಯಮ ಪ್ರತಿನಿಧಿ ಮೋಹನ್ ರಾವ್ ಪಾವಂಜೆ, ಮತ್ತಿತರರು ಉಪಸ್ಥಿತರಿದ್ದರು ಭಾವನಾ ವಿಷ್ಣುಮೂರ್ತಿ ಕೆರೆ ಮಠ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು ಹಾಗೂ ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!