ಕಳ್ಳರು ನುಗ್ಗಿ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದ ಘಟನೆ ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿ ಗ್ರಾಮದ ಶೀಲಾ ಎಂಬವರ ಮನೆಯಲ್ಲಿ ನಡೆದಿದೆ.

ಶೀಲಾ ಅವರು ತನ್ನ ಅನಾರೋಗ್ಯಪೀಡಿತ ಗಂಡನನ್ನು ಮಗಳ ಸಹಾಯದಿಂದ ಚಿಕಿತ್ಸೆ ನೀಡುವ ಬಗ್ಗೆ ಮನೆಗೆ ಬೀಗ ಹಾಕಿ ಆಸ್ಪತ್ರೆಗೆ ಹೋದವರು ಮಧ್ಯಾಹ್ನ ಹಿಂದಿರುಗಿ ಬಂದಾಗ ಮನೆಯ ಬಾಗಿಲು ತೆರೆದಿತ್ತು.
ಮನೆಯೊಳಗಿದ್ದ ಕಪಾಟಿನ ಬಾಗಿಲು ತೆರೆಯಲ್ಪಟ್ಟು ಅದರಲ್ಲಿದ್ದ 2.50 ಲಕ್ಷ ರೂ.ಗೂ ಅಧಿಕ ಮೊತ್ತದ ಎಂಟೂವರೆ ಪವನ್ ತೂಕದ ಚಿನ್ನವನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.



