ಜನ ಮನದ ನಾಡಿ ಮಿಡಿತ

Advertisement

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವವರ ಕೈಯಲ್ಲಿ ‘ದೊಣ್ಣೆ ಕಡ್ಡಾಯ’

ತಿರುಪತಿಗೆ ಜೀವನದಲ್ಲಿ ಒಮ್ಮೆಯಾದರೂ ಹೋಗಬೇಕು ಎನ್ನುವ ಬಯಕೆ ಹಿಂದೂ ಸನಾತನ ಧರ್ಮದ ಜನರಲ್ಲಿ ಇರುವುದು ಸಹಜ.
ಆದರೆ ಪ್ರಸ್ತುತ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಹೋಗುವವರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಹೋಗಬೇಕೆಂದು, ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಆದೇಶ ಜಾರಿ ಮಾಡಿದೆ.


ಇತ್ತೀಚೆಗೆ ತಿಮ್ಮಪ್ಪನ ದರ್ಶನ ಮಾಡಲು ತೆರಳುತ್ತಿದ್ದ ಸಂದರ್ಭದಲ್ಲಿ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿತ್ತು. ಈ ಹಿನ್ನೆಲೆ ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ಆಡಳಿತ ಮಂಡಳಿ ಮುಂಜಾಗ್ರತಾ ಕ್ರಮ ವಹಿಸುತ್ತಿದ್ದು, ಭಕ್ತರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಹೋಗುವಂತೆ ತಿಳಿಸಿದೆ. ಅಲ್ಲದೇ ಪಾದಚಾರಿ ಮಾರ್ಗದಲ್ಲಿ ಹೋಗುವವರರು ಗುಂಪಿನಲ್ಲಿ ಹೋಗಬೇಕು. ಒಂದೊಂದು ಗುಂಪಿಗೂ ಒಬ್ಬ ಸೆಕ್ಯೂರಿಟಿ ಗಾರ್ಡ್‍ನ್ನು ಇರಿಸಲಾಗುತ್ತದೆ ಅಂತ ತಿಳಿಸಿದೆ.
ಅಲಿಪಿರಿ ಮತ್ತು ಶ್ರೀವಾರಿ ಮೆಟ್ಟು ಪಾದಚಾರಿ ಮಾರ್ಗದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ 15 ವರ್ಷದೊಳಗಿನ ಮಕ್ಕಳಿಗೆ ಪ್ರವೇಶವಿಲ್ಲ ಎಂದು ಟಿಟಿಡಿ ಹೇಳಿದೆ. 15 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಲಿಪಿರಿ ಮಾರ್ಗದಲ್ಲಿ ಬೆಳಗ್ಗೆ 5ರಿಂದ ರಾತ್ರಿ 10ರವರೆಗೆ ಹಾಗೂ ಶ್ರೀವಾರಿ ಮೆಟ್ಟು ಪ್ರದೇಶದಲ್ಲಿ ಬೆಳಗ್ಗೆ 6 ರಿಂದ ಸಂಜೆ 6ರವೆರೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಟಿಟಿಡಿ ತಿಳಿಸಿದೆ.

ತಿರುಮಲ ಬೆಟ್ಟವನ್ನು ನಡಿಗೆಯ ಮೂಲಕ ತೆರಳುವ ಭಕ್ತರ ಮತ್ತು ಮಕ್ಕಳ ಕೈಗೆ ಅಲ್ಲಿನ ಪೋಲೀಸ್ ಸಿಬ್ಬಂದಿ ಬ್ಯಾಂಡ್ ಕಟ್ಟುತ್ತಾರೆ. ಮಕ್ಕಳು ಹೆತ್ತವರಿಂದ ನಾಪತ್ತೆಯಾದರೆ ಅವರನ್ನು ಸುಲಭವಾಗಿ ಹುಡುಕಲು ಇದು ಉಪಯುಕ್ತವಾಗಿದೆ. ಇದರೊಂದಿಗೆ ಮಕ್ಕಳ ಕೈಯಲ್ಲಿರುವ ಬ್ಯಾಂಡ್‍ನಲ್ಲಿ ಪೋಷಕರ ವಿವರಗಳನ್ನು ನಮೂದಿಸಲಾಗುತ್ತದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!