ಜನ ಮನದ ನಾಡಿ ಮಿಡಿತ

Advertisement

ಚಂದ್ರನ ಅಂಗಳಕ್ಕೆ ಚಂದ್ರಯಾನ-3 ತಲುಪಲು ಕ್ಷಣಗಣನೆ…!

ಚಂದ್ರನ ಅಂಗಳದಲ್ಲಿ ಭಾರತದ ಮಹತ್ವಾಕಾಂಕ್ಷಿಯ ಚಂದ್ರಯಾನ-3 ಲ್ಯಾಂಡ್ ಆಗಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ.
ಇಸ್ರೋ ತನ್ನ ಚಂದ್ರಯಾನ-3 ಸ್ಯಾಟಲೈಟ್ ಅನ್ನು ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಮಾಡಲು ಮುಂದಾಗಿದೆ. ಪ್ರತಿಯೊಂದು ಹಂತದಲ್ಲೂ ಯಶಸ್ವಿಯಾಗಿರುವ ಇಸ್ರೋ ಇವತ್ತು ಮತ್ತೊಂದು ಮೈಲಿಗಲ್ಲು ಸಾಧಿಸಿದೆ.


ಚಂದ್ರಯಾನ-3 ಇವತ್ತು ಯಶಸ್ವಿಯಾಗಿ ಚಂದ್ರನ ಅಂತಿಮ ಕಕ್ಷೆಯನ್ನು ತಲುಪಿದ್ದು, ಇಸ್ರೋ ಲೇಟೆಸ್ಟ್ ಮಾಹಿತಿಯನ್ನು ಇಸ್ರೋದ ಮಾಹಿತಿ ಪ್ರಕಾರ ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಇಂದು ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಈ ಮೂಲಕ ಚಂದ್ರಯಾನ-3 ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ಅಂದ್ರೆ ಇಸ್ರೋದ ಚಂದ್ರಯಾನ-3 ಚಂದ್ರನಿಗೆ ಇನ್ನು ಕೇವಲ 153 km x 163 km ಅಂತರದಲ್ಲಿದೆ. ನಾಳೆ ಅಂದ್ರೆ ಆಗಸ್ಟ್ 17ರಂದು ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಯಲಿದೆ. ಲ್ಯಾಂಡರ್ ಮಾಡ್ಯೂಲ್‌ನಿಂದ ಪ್ರೊಪಲ್ಟನ್ ಮಾಡ್ಯೂಲ್ ಅನ್ನು ಪ್ರತ್ಯೇಕಿಸುವ ಮುಹೂರ್ತವೂ ನಿಗದಿಯಾಗಿದೆ.


ಕಳೆದ ಜುಲೈ 14ರಂದು ಉಡಾವಣೆಯಾಗಿದ್ದ ಚಂದ್ರಯಾನ-3 ತನ್ನ ಯಶಸ್ವಿ ಪ್ರಯಾಣವನ್ನು ಮುಂದುವರಿಸಿದೆ. ಆಗಸ್ಟ್ 5ರಂದು ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ಚಂದ್ರಯಾನ 3 ಇಂದು ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಪ್ರವೇಶಿಸಿದೆ. ನಾಳೆ ಲ್ಯಾಂಡಲ್ ಮಾಡ್ಯೂಲ್‌ನಿಂದ ಪ್ರೊಪಲ್ಟನ್ ಮಾಡ್ಯೂಲ್ ಅನ್ನು ಪ್ರತ್ಯೇಕಿಸಲಾಗುತ್ತಿದೆ. ಎಲ್ಲಾ ಅಂದುಕೊAಡತೆ ಆದರೆ ಇದೇ ಆಗಸ್ಟ್ 23ರಂದು ಚಂದ್ರಯಾನ-3 ಸಾಫ್ಟ್ ಲ್ಯಾಂಡಿAಗ್ ಆಗಲಿದೆ. ಅಂದು ಚಂದ್ರನ ಮೇಲ್ಮಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜನೆ ತಯಾರಾಗಿದೆ.

ಆಗಸ್ಟ್ 23ರಂದು ಚಂದ್ರಯಾನ-3ನಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಿದ್ರೆ ಇಸ್ರೋ ಹೊಸದೊಂದು ಇತಿಹಾಸ ಬರೆಯಲಿದೆ. ಅಮೆರಿಕಾ, ರಷ್ಯಾ, ಚೀನಾದ ಈ ಸಾಧನೆ ಮಾಡಿದ 4ನೇ ದೇಶ ಭಾರತ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಲಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!