ಜನ ಮನದ ನಾಡಿ ಮಿಡಿತ

Advertisement

ಎಣ್ಮಕಜೆ ಗ್ರಾಪಂ ನ ಸ್ವಾತಂತ್ರ್ಯ ದಿನಾಚರಣೆಗೆ ಸಾಧಕರಿಗೆ ಸನ್ಮಾನ- ಪ್ರತಿಭಾ ಸಂಗಮ ಸಂಗೀತ ಸೌರಭ ಕಾರ್ಯಕ್ರಮ

ಪೆರ್ಲ: ಎಣ್ಮಕಜೆ ಗ್ರಾ.ಪಂ.ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಾಧಕರಿಗೆ ಸನ್ಮಾನ, ಎಪ್ಲಸ್ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ದೇಶ ಭಕ್ತಿ ಗೀತೆಗಳ ಸಂಗೀತ ಸೌರಭ ಕಾರ್ಯಕ್ರಮದೊಂದಿಗೆ ವೈವಿಧ್ಯಮಯವಾಗಿ ಆಚರಿಸಲಾಯಿತು. ಬಜಕೂಡ್ಲು ಸಮೀಪದ ಕಾನ ಎಂಬಲ್ಲಿರುವ ಸಾಂತ್ವನ ವಿಶೇಷ ಬಡ್ಸ್ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಉದ್ಘಾಟಿಸಿದರು. ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಅಧ್ಯಕ್ಷತೆ ವಹಿಸಿದ್ದರು.


ಜಿಲ್ಲಾ ಪಂಚಾಯಿತಿ ಸದಸ್ಯ ನಾರಾಯಣ ನಾಯ್ಕ್,ಬ್ಲೋಕ್ ಪಂ.ಸದಸ್ಯ ಕೆ.ಪಿ.ಅನಿಲ್ ಕುಮಾರ್, ಎಣ್ಮಕಜೆ ಗ್ರಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಎಸ್.ಗಾಂಭೀರ್, ಸೌದಾಭಿ ಹನೀಫ್, ಜಯಶ್ರೀ ಕುಲಾಲ್, ಹಾಗೂ ಪಂಚಾಯತು ಸದಸ್ಯರಾದ ಮಹೇಶ್ ಭಟ್, ಶಶಿಧರ, ನರಸಿಂಹ ಪೂಜಾರಿ,ರಾಮಚಂದ್ರ, ಕುಸುಮಾವತಿ, ಉಷಾ, ಝರಿನಾ ಮುಸ್ತಾಫ,ಕುಟುಂಬಶ್ರೀ ಸಿಡಿಎಸ್ ಅಧ್ಯಕ್ಷೆ ಜಲಜಾಕ್ಷಿ ಹಾಗೂ ಪಂ.ಉದ್ಯೋಗಿಗಳು,ಪಂ.ಯೋಜನಾ ಸಮಿತಿಯ ಉಪಾಧ್ಯಕ್ಷೆ ಆಯಿಷಾ ಎ.ಎ, ವಿವಿಧ ಇಲಾಖಾ ಅಧಿಕಾರಿಗಳು ಪಾಲ್ಗೊಂಡರು. ಈ ಸಂದರ್ಭದಲ್ಲಿ ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅಪ್ಪಯ್ಯ ಮಣಿಯಾಣಿ ಕಾಟುಕುಕ್ಕೆ, ಸದಾಶಿವ ನಾಯ್ಕ್ ಖಂಡಿಗೆ, ಈಶ್ವರ ನಾಯ್ಕ ವಾಣಿನಗರ, ನಿವೃತ್ತ ಪ್ರಾಂಶುಪಾಲ ಬಾಪೂಂಞಿ ಮಾಸ್ತರ್, ಸಾಹಿತಿ ಹರೀಶ್ ಪೆರ್ಲ, ಕಾಷ್ಠ ಶಿಲ್ಪಿ, ನ್ಯಾಯವಾದಿ ಜಿ.ಕೆ.ಭಟ್ ಪೂವಾಳೆ, ಆಯುರ್ವೇದಿಕ್ ಶಿಕ್ಷಣದಲ್ಲಿ ಪ್ರಥಮ ರಾಂಕ್ ಚಿನ್ನದ ಪದಕ ವಿಜೇತೆ ಡಾ.ರಮ್ಯ ದರ್ಬೆ, ಕೃಷಿ ಯಂತ್ರೋಪಕರಣ ಅವಿಷ್ಕಾರಿಸಿದ ಗೋಪಾಲಕೃಷ್ಣ ಶರ್ಮ ಕಾಚಿಕ್ಕಾಡು, ಯುವ ಕವಯಿತ್ರಿ ಸುಜಯ ಸಜಂಗದ್ದೆ, ಕ್ರೀಡಾ ಪಟು ರಾಕೇಶ್ ಕುಮಾರ್ ನಲ್ಕ, ಹಾಗೂ ಎಸ್ಸಸ್ಸೆಲ್ಸಿ, ಪ್ಲಸ್ ಟು ಪರೀಕ್ಷೆಯಲ್ಲಿ ಎ ಪ್ಲಸ್ ಗಳಿಸಿದ ಪಂಚಾಯತು ಮಟ್ಟದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ,ಎಸ್ಸಸ್ಸೆಲ್ಸಿ ಪರೀಕ್ಷೆಯಲ್ಲಿ ನೂರು ಶೇಕಡಾ ತೇರ್ಗಡೆ ದಾಖಲಿಸಿದ ಪೆರ್ಲ ಸತ್ಯನಾರಾಯಣ ಶಾಲೆ, ಪಡ್ರೆ ಸರಕಾರಿ ಹೈಯರ್ ಸೆಕೆಂಡರಿ ಶಾಲೆ, ಕಾಟುಕುಕ್ಕೆ ಶ್ರೀಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆ, ಶೇಣಿ ಶ್ರೀಶಾರದಾಂಬ ಹೈಯರ್ ಸೆಕೆಂಡರಿ ಶಾಲೆಗೆ ವಿಶೇಷ ಪುರಸ್ಕಾರ ವಿತರಿಸಲಾಯಿತು. ಪ್ರೇಮ್ ಚಂದ್ ಪಿ ಎಸ್ ಸ್ವಾಗತಿಸಿ .ಬಡ್ಸ್ ಶಾಲೆ ಪ್ರಿನ್ಸಿಪಾಲ್‌ ಮರಿಯಾಂಬಿ ವಂದಿಸಿದರು‌.

Leave a Reply

Your email address will not be published. Required fields are marked *

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

error: Content is protected !!